ಬೆಂಗಳೂರು: ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳಿ ಎಂದು ದತ್ತಾ ಅವರ ಬೆಂಬಲಿಗರು ಬಹಿರಂಗವಾಗಿಯೇ ಮಾಜಿ ಸಿಎಂ ಸಿದ್ದರಾಮಯ್ಯಗೆ ಸೋಮವಾರ ಮನವಿ ಮಾಡಿದ್ದಾರೆ. ಸಂಕ್ರಾಂತಿ ಬಳಿಕ ಮಾಜಿ ಶಾಸಕ ವೈಎಸ್ವಿ ದತ್ತ ಕಾಂಗ್ರೆಸ್ ಸೇರಲಿದ್ದಾರೆ ಎಂದು ಹರಿದಾಡುತ್ತಿರವ ಸುದ್ದಿಗೆ ದತ್ತ ಬೆಂಬಲಿಗರ ಈ ಮಾತು ಪುಷ್ಟಿ ನೀಡುವಂತಿದೆ.
ರೈತರ ವಿಚಾರವಾಗಿ ದತ್ತ ಅವರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದರು. ಈ ವೇಳೆ ಬೆಂಬಲಿಗರು ಈ ಪ್ರಸ್ತಾಪ ಮಾಡಿದರು. ಸಿದ್ದರಾಮಯ್ಯನವರೇ ಕೃಷ್ಣಮೂರ್ತಿ ಕಾಲದಿಂದಲೂ ನೀವು ಹೇಳಿದಂತೆಯೇ ಮಾಡಿದ್ದೇವೆ, ಇದೊಂದು ಬಾರಿ ದತ್ತ ಅವರಿಗೆ ಅವಕಾಶ ಮಾಡಿಕೊಡಿ ಎಂದು ಬೆಂಬಲಿಗರು ಮನವಿ ಮಾಡಿದರು.
ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ದತ್ತ ಕಾಂಗ್ರೆಸ್ ಸೇರುವುದು ಬಿಡುವುದು ಅವರೇ ನಿರ್ಧರಿಸಬೇಕು. ಅವರ ಬೆಂಬಲಿಗರು ದತ್ತ ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳಿ ಅಂತ ಹೇಳಿದರು. ಆದರೆ ಅದನ್ನ ದತ್ತ ಅವರೇ ನಿರ್ಧಾರ ಮಾಡಬೇಕು. ನೋಡೋಣ ಮುಂದೆ ಏನೇನಾಗುತ್ತೆ ಅಂತ ಎಂದರು.
ಹತ್ತು ದಿನದ ಹಿಂದಷ್ಟೇ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿ ಅರೇಕಲ್ಲಮ್ಮ ದೇವಿಯ ಬಾನಸೇವೆ ಅಂಗವಾಗಿ ವೈಎಸ್ವಿ ದತ್ತ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಸಂಸದ ಪ್ರಜ್ವಲ್ ರೇವಣ್ಣ, ಜಾತ್ಯತಿತ ನಿಲುವಿನ ಕಟ್ಟಾಳು ದತ್ತ. ಅವರು ಕಾಂಗ್ರೆಸ್ ಸೇರುತ್ತೇನೆಂದು ಎಲ್ಲಿಯೂ ಹೇಳಿಲ್ಲ. ಆರು ತಿಂಗಳಿಂದ ಕಾಂಗ್ರೆಸ್ನವರೇ ಸೃಷ್ಟಿ ಮಾಡಿರುವ ದತ್ತ ಕಾಂಗ್ರೆಸ್ ಸೇರ್ಪಡೆ ಕುರಿತಾದ ರೆಕ್ಕೆಪುಕ್ಕವಿಲ್ಲದ ಮಾಹಿತಿ ಹರಿದಾಡುತ್ತಿದೆ. ಇದಕ್ಕೆ ತೆರೆ ಎಳೆಯಬೇಕಾಗಿದೆ. ಜೆಡಿಎಸ್ ಕಾರ್ಯಕರ್ತರು ಇಂಥ ಊಹಾಪೋಹಗಳಿಗೆ ತಲೆಕೆಡಿಸಿಕೊಳ್ಳದೆ ಪಕ್ಷ ಸಂಘಟನೆಯಲ್ಲಿ ಕ್ರಿಯಾಶೀಲರಾಗಬೇಕಿದೆ. ದತ್ತಣ್ಣ ಜೆಡಿಎಸ್ನಲ್ಲಿ ಭದ್ರವಾಗಿ ನೆಲೆಯೂರಿದ್ದು ಅವರನ್ನು ಗೌರವದಿಂದ ನಡೆಸಿಕೊಳ್ಳಲಾಗುವುದು ಎಂದಿದ್ದರು.
ವೈಎಸ್ವಿ ದತ್ತ ಕಾಂಗ್ರೆಸ್ ಸೇರ್ಪಡೆ ಕುರಿತ ಸುದ್ದಿಗೆ ತೆರೆ ಎಳೆದ ಸಂಸದ ಪ್ರಜ್ವಲ್ ರೇವಣ್ಣ
ಕರೊನಾಗೆ ಗಂಡ ಬಲಿ: ಕಂಗಾಲಾದ ಪತ್ನಿ-ಮಗ: ವಿಧವೆಗೆ ಬಾಳು ಕೊಟ್ಟು ಮಾದರಿಯಾದ ಮೃತನ ಸ್ನೇಹಿತ!