ನವದೆಹಲಿ: 2020-21ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಪೊಲೀಸರು ಹಾಗೂ ಎಎಪಿ ನಾಯಕರ ಜಟಾಪಟಿ ತಾರಕಕ್ಕೇರಿದೆ.
ಮಂಗಳವಾರ ದೆಹಲಿ ಸರ್ಕಾರದ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಕುರಿತು ಎಎಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ಧಾರೆ.
ಅನುಚಿತ ವರ್ತನೆ
ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ ಪತ್ರಕರ್ತರು ಮನೀಶ್ ಅವರನ್ನು ದೆಹಲಿ ಸರ್ಕಾರ ಹಾಗೂ ಕೇಂದ್ರ ಸರ್ಕಾರಿ ನೌಕರರ ನಡುವಿನ ಜಟಾಪಟಿ ಕುರಿತು ಪ್ರಶ್ನೆಯನ್ನು ಕೇಳುತ್ತಾರೆ.
ಈ ವೇಳೆ ಸುದ್ದಿಗಾರರ ಬಳಿ ಮಾತನಾಡಲು ಮುಂದಾದ ಸಿಸೋಡಿಯಾ ಅವರನ್ನು ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮದವರನ್ನು ತಳುತ್ತಾ ಕರೆದೊಯ್ಯುವುದು ಕಂಡು ಬರುತ್ತದೆ. ಪೊಲೀಸರು ಅವರ ಕತ್ತಿನ ಪಟ್ಟಿಗೆ ಕೈ ಹಾಕಿ ಎಳೆದೊಯ್ಯುವುದು ಸದ್ಯ ವೈರಲ್ ವಿಡಿಯೋದಲ್ಲಿ ಕಂಡು ಬಂದಿದೆ.
ಯಾರ ಆಜ್ಞೆ ಮೇಲೆ ಕೆಲಸ ಮಾಡುತ್ತಿದ್ದಾರೆ
ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ರೀತಿ ಅನುಚಿತವಾಗಿ ವರ್ತಿಸುವ ಹಕ್ಕೆ ಪೊಲೀಸರಿಗೆ ಇದೆಯಾ. ಈಗೆ ಮಾಡುವಂತೆ ಮೇಲಿಂದ ಆಜ್ಞೆ ಆಗಿದೆಯೆ ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸರು ಆರೋಪಿತರ ಸ್ಥಾನದಲ್ಲಿರುವವರು ಮಾಧ್ಯಮಗಳಿಗೆ ಹೇಳಿಕೆ ಕೊಡುವುದು ಕಾನೂನಿಗೆ ವಿರುದ್ಧವಾಗಿದೆ. ವೈರಲ್ ಆಘಿರುವ ವಿಡಿಯೋದಲ್ಲಿ ನಾವು ಮನೀಶ್ ಅವರಿಗೆ ಭದ್ರತೆಯನ್ನು ಒದಗಿಸಿದ್ದೇವೆ ಇಲ್ಲಿ ಯಾರು ಅನುಚಿತವಾಗಿ ವರ್ತಿಸಿಲ್ಲ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.