More

    ಆಪ್​ ಬೆಂಬಲ ಕಾಂಗ್ರೆಸ್​ಗೆ

    ಕೊಪ್ಪಳ: ಲೋಕಸಭೆ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಐಎನ್​ಡಿಐಎಗೆ ಬೆಂಬಲ ಘೋಷಿಸಿದೆ. ಕೊಪ್ಪಳದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಪರವಾಗಿ ಮತಯಾಚನೆ ಮಾಡಲಿದ್ದೇವೆ ಎಂದು ಎಎಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರ್ಜುನ ಹಲಗಿಗೌಡರ್​ ತಿಳಿಸಿದರು.

    ಕೇಂದ್ರ ಸರ್ಕಾರ ಜಾತಿ, ಧರ್ಮ ಆಧಾರದಲ್ಲಿ ರಾಜಕೀಯ ಮಾಡುತ್ತಿದೆ. ಕೋಮುವಾದ ವಿಷ ಬೀಜ ಬಿತ್ತುತ್ತಿದ್ದು, ಅಭಿವೃದ್ಧಿ ಮಾಡುತ್ತಿಲ್ಲ. ಹೀಗಾಗಿ ನಾವು ಕಾಂಗ್ರೆಸ್​ಗೆ ಬೆಂಬಲ ನೀಡಿದ್ದೇವೆ. ದೆಹಲಿ, ಪಂಜಾಬ್​, ಹರಿಯಾಣ ಸೇರಿ 25 ಕ್ಷೇತ್ರಗಳಲ್ಲಿ ಎಎಪಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಎಲ್ಲಡೆ ಗೆಲ್ಲುವ ವಿಶ್ವಾಸವಿದೆ. ಕೊಪ್ಪಳದಲ್ಲಿ ರಾಜಶೇಖರ ಹಿಟ್ನಾಳ ಪರ ಮತ ಯಾಚಿಸಲಿದ್ದೇವೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ಬಿಜೆಪಿ ಚುನಾವಣಾ ಬಾಂಡ್​ಗಳ ಮೂಲಕ ಸಾಕಷ್ಟು ಭ್ರಷ್ಟಾಚಾರ ನಡೆಸಿದೆ. ಸವೋಚ್ಛ ನ್ಯಾಯಾಲಯ ಛೀಮಾರಿ ಹಾಕಿದೆ. ಹೀಗಿದ್ದರೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಮತ್ತೆ ಬಾಂಡ್​ ತರುವುದಾಗಿ ಹೇಳಿ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

    ಕಾಂಗ್ರೆಸ್​ ನಗರ ಬ್ಲಾಕ್​ ಅಧ್ಯಕ್ಷ ಎಂ.ಕಾಟನ್​ ಪಾಷಾ ಮಾತನಾಡಿ, ಈ ಬಾರಿ ಮೋದಿ ಅಲೆ ಇಲ್ಲ. ಗ್ಯಾರಂಟಿ ಯೋಜನೆಗಳು ಜನರಿಗೆ ವರವಾಗಿವೆ. ಐಎನ್​ಡಿಐಎ ಒಕ್ಕೂಟ ಅಧಿಕಾರಕ್ಕೆ ಬರವುದು ಪಕ್ಕಾ ಎಂದರು. ನಗರಸಭೆ ಮಾಜಿ ಸದಸ್ಯ ರಾಜಶೇಖರ ಆಡೂರು ಮಾತನಾಡಿದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್​ ಪಾಷಾ ಪಲ್ಟನ್​, ಎಎಪಿ ಜಿಲ್ಲಾಧ್ಯಕ್ಷ ಕನಕಪ್ಪ ಮಳಗಾವಿ, ಮುಖಂಡ ಜಿಲಾನ್​ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts