ಮೋದಿ, ಅಮಿತ್​ಷಾ, ರಾಹುಲ್​ ಅಪ್ರಾಮಾಣಿಕರು; ಧೈರ್ಯವಿದ್ದರೆ… AAP ಆರೋಪಕ್ಕೆ ಖಡಕ್​ ತಿರುಗೇಟು ನೀಡಿದ Congress

Modi Rahul Amit

ನವದೆಹಲಿ: ಫೆಬ್ರವರಿ 05ರಂದು ಮತದಾನ ನಡೆಯಲಿರುವ 70 ಸದಸ್ಯಬಲದ ದೆಹಲಿ ವಿಧಾನಸಭೆ ಚುನಾವಣಾ ಅಖಾಡ ರಂಗೇರಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಆಡಳಿತರೂಢ ಎಎಪಿ ಭರ್ಜರಿ ಪ್ರಚಾರದಲ್ಲಿ ತೊಡಗಿದೆ. ಇನ್ನೂ ಚುನಾವಣೆ ಸಮಯದಲ್ಲಿ ರಾಜಕೀಯ ನಾಯಕರು ಆರೋಪ-ಪ್ರತ್ಯಾರೋಪ ಮಾಡುವುದು ಸಹಜ. ಅದೇ ರೀತಿ ಎಎಪಿ (AAP) ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress)​ ನಾಯಕರನ್ನು ಅಪ್ರಾಮಾಣಿಕ ಎಂದು ಕರೆಯುವ ಮೂಲಕ ಮತದಾರರ ಗಮನ ಸೆಳೆಯಲು ಮುಂದಾಗಿದೆ.

ಎಎಪಿ ಬಿಡುಗಡೆ ಮಾಡಿರುವ ಪೋಸ್ಟರ್​ ನೋಡುವುದಾದರೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಯೋಗಿ ಆದಿತ್ಯನಾಥ್​, ಕಾಂಗ್ರೆಸ್​ ನಾಯಕರಾದ ರಾಹುಲ್​ ಗಾಂಧಿ ಸೇರಿದಂತೆ ಕೆಲ ನಾಯಕರನ್ನು ಅಪ್ರಾಮಾಣಿಕ ಎಂದು ಬಣ್ಣಿಸಲಾಗಿದೆ. ಈ ವಿಚಾರ ರಾಜಕೀಯ ಸಂಘರ್ಷಕ್ಕೆ ನಾಂದಿ ಹಾಡಿದ್ದು, ಕಾಂಗ್ರೆಸ್​ (Congress) ಎಎಪಿಗೆ ತಿರುಗೇಟು ನೀಡಿದೆ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ (Congress) ನಾಯಕಿ​ ಅಲ್ಕಾ ಲಾಂಬಾ, ಕಳೆದ ಲೋಕಸಭೆ ಚುನಾವಣೆಯಲ್ಲಿ ಕೇಜ್ರಿವಾಲ್​ ಅವರ ಪಕ್ಷಕ್ಕೆ ದೆಹಲಿಯ ಏಳು ಲೋಕಸಭೆ ಕ್ಷೇತ್ರವನ್ನು ಬಿಟ್ಟು ಕೊಡಲಾಗಿತ್ತು. ಅರವಿಂದ್ ಕೇಜ್ರಿವಾಲ್ ಅವರಿಗೆ ಧೈರ್ಯವಿದ್ದರೆ, ಕೂಡಲೇ ಅವರು ಇಂಡಿಯಾ ಮೈತ್ರಿಕೂಟವನ್ನುತೊರೆಯುತ್ತಿರುವುದಾಗಿ ಘೋಷಿಸಬೇಕು. ಲೋಕಸಭೆಯಲ್ಲಿ ಕಾಂಗ್ರೆಸ್​​ ಪಕ್ಷದ 100 ಸಂಸದರಿದ್ದು, ದೆಹಲಿಯ ಏಳು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲು ಅರವಿಂದ್​ ಕೇಜ್ರಿವಾಲ್​ ಕಾರಣರಾದರು. 

ಲೋಕಸಭೆ ಚುನಾವಣೆ ಸಮಯದಲ್ಲಿ ಮೈತ್ರಿ ಮಾಡಿಕೊಳ್ಳುವಂತೆ ಕಾಂಗ್ರೆಸ್ ನಾಯಕರಿಗೆ ದುಂಬಾಲು ಬಿದ್ದು, ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲುವಂತೆ ಮಾಡಿದ್ದೀರಾ. ನಿಮ್ಮ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಕಾಂಗ್ರೆಸ್​ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ ಎಂದು ಕಾಂಗ್ರೆಸ್ ನಾಯಕಿ​ ಅಲ್ಕಾ ಲಾಂಬಾ ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಒಂದು ಕಾಲದಲ್ಲಿ ಪಡ್ಡೆಹುಡುಗರ ನಿದ್ದೆಗೆಡಿಸಿದ್ದ ಹಾಟ್​ ಬೆಡಗಿ ಈಗ ಸನ್ಯಾಸಿ! ಮಹಾಕುಂಭಮೇಳದಲ್ಲಿ ಗಮನಸೆಳೆಯುತ್ತಿರುವ ನಟಿಯ ವಿವಾದ ಒಂದೆರಡಲ್ಲ

ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ, ಪ್ರತಿ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ: CM Siddaramaiah

Share This Article

ಹುಡುಗಿಯರೇ.. ಬೇಸಿಗೆಯಲ್ಲಿ ಸುಂದರವಾಗಿ ಕಾಣಬೇಕಾದರೆ ಈ ತಪ್ಪುಗಳನ್ನು ಮಾಡಬೇಡಿ! Beauty Tips

Beauty Tips: ಬೇಸಿಗೆ ಸಮೀಪಿಸುತ್ತಿರುವುದರಿಂದ, ಅನೇಕ ಜನರು ತಮ್ಮ ಚರ್ಮವನ್ನು ರಕ್ಷಿಸಲು ಹೆಣಗಾಡುತ್ತಿದ್ದಾರೆ. ಹುಡುಗಿಯರು ಹೊರಗೆ…

ನಿಮಗೆ ಕೂದಲು ಉದುರುವ ಸಮಸ್ಯೆ ಇದೆಯೇ? ಹಾಗಲಕಾಯಿ ರಸವನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ…bitter gourd

bitter gourd : ನಮ್ಮಲ್ಲಿ ಹಲವರಿಗೆ ಹಾಗಲಕಾಯಿ ತಿನ್ನುವುದು ಇಷ್ಟವಾಗುವುದಿಲ್ಲ. ಹಾಗಲಕಾಯಿ ತಿನ್ನಲು ಸ್ವಲ್ಪ ಕಹಿಯಾಗಿದ್ದರೂ,…

ಸುರಕ್ಷಿತ ಪ್ರಯಾಣಕ್ಕಾಗಿ ನಿಮ್ಮ ಕಾರಿನಲ್ಲಿ ಇರಲೇಬೇಕಾದ 6 ವಸ್ತುಗಳು ಯಾವವು ಗೊತ್ತಾ? Vastu Tips

Vastu Tips: ನಮ್ಮ ಮನೆಗಳು ಮತ್ತು ಕಚೇರಿಗಳಿಗೆ ಮಾತ್ರವಲ್ಲದೆ, ನಮ್ಮ ವಾಹನಗಳಿಗೂ ಕೆಲವು ವಾಸ್ತು ನಂಬಿಕೆಗಳಿವೆ.…