ಮಂಡ್ಯ: ಕಾಲೇಜಿಗೆ ಹೋಗಲು ಬಸ್ಗಾಗಿ ಕಾಯುತ್ತಿದ್ದ ಅಪ್ರಾಪ್ತನನ್ನು ಅಪಹರಿಸಿದ ದುಷ್ಕರ್ಮಿಗಳು ನೀಚ ಕೃತ್ಯ ಎಸಗಿದ್ದಾರೆ.
ಬಸ್ಸ್ಟ್ಯಾಂಡ್ನಲ್ಲಿ ಒಬ್ಬನೇ ಬಸ್ಗೆ ಕಾಯುತ್ತಿದ್ದ. ಆತನನ್ನು ಡ್ರಾಪ್ ಕೊಡುತ್ತೇವೆ ಎಂದು ಕರೆದುಕೊಂಡು ಹೋದ ದುಷ್ಕರ್ಮಿಗಳು ಬಾಲಕನ ಮರ್ಮಾಂಗವನ್ನು ಕತ್ತರಿಸಿದ್ದಾರೆ.
ಕಾರಿನಲ್ಲಿ ಮೂರ್ನಾಲ್ಕು ಕಿಲೋಮೀಟರ್ ಕರೆದೊಯ್ದ ದುಷ್ಕರ್ಮಿಗಳು ಬಾಲಕನ ಮರ್ಮಾಂಗ ಕತ್ತರಿಸಿ ಆತನನ್ನು ರಸ್ತೆ ಬದಿಯಲ್ಲಿ ಬಿಸಾಡಿ ಪರಾರಿಯಾಗಿದ್ದಾರೆ.
ನರಳುತ್ತಿದ್ದ ಬಾಲಕನ ನೆರವಿಗೆ ಧಾವಿಸಿದ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ, ಘಟನೆ ಈ ಬಗ್ಗೆ ಆತನ ಪಾಲಕರಿಗೆ ತಿಳಿಸಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗಿದ್ದು ಪ್ರಾಣಾಪಾಯ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.
ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ದುಷ್ಕರ್ಮಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.