ಬೆಂಗಳೂರು: ಮಹಾಮಾರಿ ಕರೊನಾ ಸಂಕಷ್ಟ ಕಾಲದಲ್ಲಿ ಮಾನವೀಯ ಕಾರ್ಯಗಳಲ್ಲಿ ತೊಡಗಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಇತ್ತೀಚೆಗಷ್ಟೇ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡು ಸುದ್ದಿಯಾಗಿದ್ದರು. ಇದೀಗ ಇನ್ನೂ ನಾಲ್ಕು ಶಾಲೆಗಳನ್ನು ದತ್ತು ಪಡೆಯುವ ಮೂಲಕ ಸಮಾಜಮುಖಿ ಕೆಲಸಕ್ಕೆ ಮುಂದಾಗಿದ್ದಾರೆ.
ಇದನ್ನೂ ಓದಿ: ಮತ್ತೆ ಕೆಜಿಎಫ್ನತ್ತ: ಮುಂದಿನ ವಾರದಿಂದ ಕೊನೆಯ ಹಂತದ ಚಿತ್ರೀಕರಣ
ಸರ್ಕಾರಿ ಶಾಲೆಗಳ ಮೇಲೆ ಕಣ್ಣಿಟ್ಟಿರುವ ಸುದೀಪ್, ಅವುಗಳ ಅಭಿವೃದ್ಧಿಗೆ ಕಿಚ್ಚ ಪಣ ತೊಟ್ಟಿದ್ದಾರೆ. ಕಿಚ್ಚ ಸುದೀಪ್ ಚಾರಿಟೆಬೆಲ್ ಸೊಸೈಟಿ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿನ ನಾಲ್ಕು ಶಾಲೆಗಳನ್ನು ದತ್ತು ಪಡೆದಿದ್ದಾರೆ. ಆವಿಗೆ ಹಳ್ಳಿ, ಹಾಳಸಸಿ, ಎಸ್.ಎನ್ ಬಡಾವಣೆ ಸಾಗರ, ಎಲ್.ಎಲ್ ಹಳ್ಳಿ ಸಾಗರ ಸೇರಿ ಒಟ್ಟು 4 ಕನ್ನಡ ಶಾಲೆಗಳನ್ನು ದತ್ತು ಪಡೆಯಲಾಗಿದೆ.
ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದ 'ಮಾಣಿಕ್ಯ'
ಕಾಡಿನಲ್ಲಿರೋ ಶಾಲೆಯ ಮಕ್ಕಳಿಗೆ ಅಕ್ಷರ ಜ್ನಾನ ಕೊಡಿಸಲು #ಸುದೀಪ ಸರ್ ನಿರ್ಧರಿಸಿ "ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ" ವತಿಯಿಂದ ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಆವಿಗೆ ಹಳ್ಳಿಯ ಒಟ್ಟು 4 ಕನ್ನಡ ಶಾಲೆಗಳನ್ನು ದತ್ತು ಪಡೆಯಲಾಯಿತು@KicchaSudeep @KSCS_Official#ಮೊದಲು_ಮಾನವನಾಗು pic.twitter.com/6z8ZeEwdMP— KICHCHA SUDEEPA CHARITABLE SOCIETY – KSCS (@KSCS_Official) August 9, 2020
ಸರ್ಕಾರಿ ಶಾಲಾ ಶಿಕ್ಷಕರ ಸಂಬಳ ಹಾಗೂ ಮಕ್ಕಳ ಸ್ಕಾಲರ್ಶಿಪ್ ಬಿಟ್ಟು ಶಾಲೆ ಅಭಿವೃದ್ಧಿಯ ಜವಾಬ್ದಾರಿಯನ್ನು ಕಿಚ್ಚ ವಹಿಸಿಕೊಂಡಿದ್ದು, ಸರ್ಕಾರಿ ಶಾಲೆಯ ಕಟ್ಟಡ ನಿರ್ಮಾಣ ಕೆಲಸ. ಪೇಂಟಿಂಗ್, ಶೌಚಾಲಯ ನಿರ್ಮಾಣ ಸೇರಿ ಶಾಲೆಗೆ ಬೇಕಾದ ಮೂಲ ಸೌಕರ್ಯವನ್ನು ಕಿಚ್ಚ ತಮ್ಮ ಟ್ರಸ್ಟ್ ಮೂಲಕ ಒದಗಿಸಲಿದ್ದಾರೆ.
ಇದನ್ನೂ ಓದಿ: ಅಭಯಾರಣ್ಯದಲ್ಲಿ ದರ್ಶನ್ ಸಫಾರಿ
ಮಾರ್ಚ್ ತಿಂಗಳಲ್ಲೇ ಶಾಲೆಗಳನ್ನು ದತ್ತು ಪಡೆಯಲು ತೀರ್ಮಾನಿಸಲಾಗಿತ್ತು. ಆದರೆ, ಕರೊನಾ ಬಂದಿದ್ದರಿಂದ ದತ್ತು ಪಡೆಯುವ ಕೆಲಸ ಆಗಿರಲಿಲ್ಲ. ಇದೀಗ ಇನ್ನೇನು ಸೆಪ್ಟಂಬರ್ನಲ್ಲಿ ಶಾಲೆಗಳು ಪುನಾರಾಂಭ ಆಗೋ ಸಾಧ್ಯತೆ ಇರುವುದರಿಂ ದತ್ತು ಪಡೆಯಲಾಗಿದೆ.