ಹುಬ್ಬಳ್ಳಿ : ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ಹಿಂಪಡೆಯಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ನಗರದ ಕಿಮ್್ಸ ಆಸ್ಪತ್ರೆ ಮಹಾದ್ವಾರದ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಪ್ರತಿಭಟನಾನಿರತರು, ಯಾವುದೇ ಕಾರಣಕ್ಕೂ ಎನ್ಇಪಿ ಹಿಂಪಡೆಯಬಾರದು ಎಂದು ಒತ್ತಾಯಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿಗಳು ಕೌಶಲ್ಯ ಆಧಾರಿತ ಶಿಕ್ಷಣ ಪಡೆಯಬಹುದು. ನಮ್ಮ ರಾಜ್ಯ ಅಷ್ಟೇ ಅಲ್ಲದೇ ಬೇರೆ ರಾಜ್ಯದಲ್ಲಿಯೂ ಸಹ ಉದೊ್ಯೕಗ ಪಡೆಯಲು ಅನುಕೂಲವಾಗುತ್ತದೆ. ಆದರೆ, ರಾಜ್ಯ ಸರ್ಕಾರ ಚುನಾವಣೆ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ಎನ್ಇಪಿ ಬದಲಿಸುತ್ತೇವೆ ಎಂಬ ಹೇಳಿದ ಕಾರಣಕ್ಕೆ ಈಗ ಹಿಂಪೆಯಲು ಯತ್ನಿಸುತ್ತಿರುವುದು ಖಂಡನೀಯ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.
ಪರಿಷತ್ ಹುಬ್ಬಳ್ಳಿ ನಗರ ಸಂಘಟನಾ ಕಾರ್ಯದರ್ಶಿ ಮೌನೇಶ ಗೌಡ ಮಾತನಾಡಿ, ಕರ್ನಾಟಕ ಮೊದಲ ಬಾರಿ ಎನ್ಇಪಿ ಅನುಷ್ಠಾನ ಮಾಡಿದ ಸಾಧನೆ ಪಾತ್ರವಾಗಿತ್ತು. ಆದರೆ, ರಾಜ್ಯ ಸರ್ಕಾರ ರಾಜಕೀಯ ದುರುದ್ದೇಶದಿಂದ ಎನ್ಇಪಿ ರದ್ದು ಪಡಿಸಲು ಮುಂದಾಗಿದೆ. ಯಾವುದೇ ಕಾರಣಕ್ಕೂ ಹಿಂಪಡೆಯಬಾರದು ಎಂದು ಆಗ್ರಹಿಸಿದರು.
ಪೊಲೀಸ್ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ನಗರ ಸಂಘಟನೆ ಸಹ ಕಾರ್ಯದರ್ಶಿ ಸಿದ್ದಾರ್ಥ ಕೋರಿ, ರಘು ಎಸ್., ಶಶಿ ಹಿರೇಮಠ ಹಾಗೂ ಇತರರು ಇದ್ದರು.