More

    ಎಸಿ ಮದನ್ ಮೋಹನ್ ಮರು ನೇಮಕ

    ಮಂಗಳೂರು: ಉಪವಿಭಾಗಾಧಿಕಾರಿ ಮದನ್ ಮೋಹನ್ ಸಿ. ಅವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮಂಗಳೂರು ಉಪವಿಭಾಗಾಧಿಕಾರಿಯಾಗಿ ಮರು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

    ಕರ್ನಾಟಕ ಆಡಳಿತ ನ್ಯಾಯ ಮಂಡಳಿ ನೀಡಿರುವ ಆದೇಶ ಅನುಷ್ಠಾನ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅ.13ರಂದು ಮದನ್ ಮೋಹನ್ ಅವರನ್ನು ಸ್ಥಳ ಗೊತ್ತುಪಡಿಸದೆ ವರ್ಗಾವಣೆಗೊಳಿಸಿದ್ದು, ಅವರ ಸ್ಥಾನಕ್ಕೆ ಮಂಗಳೂರು ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕ ರವಿಚಂದ್ರ ನಾಯಕ್ ಅವರನ್ನು ನಿಯುಕ್ತಿಗೊಳಿಸಿತ್ತು. ಆದರೆ ಈ ಪ್ರಕರಣ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯಲ್ಲಿ ತಿರಸ್ಕೃತ ಗೊಂಡ ಕಾರಣ ರಾಜ್ಯ ಸರ್ಕಾರ ಮತ್ತೆ ಮದನ್ ಮೋಹನ್ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿಯನ್ನಾಗಿ ನೇಮಿಸಿ ನ.6ರಂದು ಆದೇಶ ಮಾಡಿದೆ.

    ಮುಡಿಪು ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆಯುತ್ತಿದ್ದ ರೆಡ್ ಬಾಕ್ಸೈಟ್ ದಂಧೆ ವಿರುದ್ಧ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ 30 ಲಾರಿ, ಹಿಟಾಚಿ, ಜೆಸಿಬಿಗಳನ್ನು ವಶಪಡಿಸಿಕೊಂಡಿತ್ತು. ರೆಡ್ ಬಾಕ್ಸೈಟ್ ದಂಧೆಯಲ್ಲಿ ಕೆಲವು ಸ್ಥಳೀಯ ಜನಪ್ರತಿನಿಧಿಗಳು ಭಾಗಿಯಾಗಿದ್ದು, ಈ ದಾಳಿ ಪ್ರಭಾವಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಈ ದಾಳಿ ನಡೆದ ಕೆಲವೇ ದಿನದಲ್ಲಿ ಮದನ್ ವರ್ಗಾವಣೆಯಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts