ಬೆಂಗಳೂರು: ಹತ್ತು ಲಕ್ಷ ರೂಪಾಯಿ ಲಂಚ ಪಡೆದಿದ್ದ ಆರೋಪದ ಮೇಲೆ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಇಂದಿರಾನಗರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ರಾಮಮೂರ್ತಿ ವಿರುದ್ಧ ಎಸಿಬಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಎಸಿಬಿ ಅಧಿಕಾರಿಗಳಿಂದ ತನಿಖೆ ಮುಂದುವರಿದಿದೆ.
ಇಂದಿರಾನಗರ ಕ್ಲಬ್ ಕಾರ್ಯದರ್ಶಿ ನಾಗೇಂದ್ರ ಅವರು ನೀಡಿದ್ದ ದೂರಿನ ಮೇರೆಗೆ ಎಸಿಬಿಯಲ್ಲಿ ಈ ಎಫ್ಐಆರ್ ದಾಖಲಾಗಿದೆ. ಇಂದಿರಾನಗರ ಕ್ಲಬ್ ಸದಸ್ಯ ರಾಮ್ಮೋಹನ್ ಅವರು ಲಾಕ್ಡೌನ್ ಸಂದರ್ಭದಲ್ಲಿ ಅತಿಕ್ರಮವಾಗಿ ಕ್ಲಬ್ಗೆ ಪ್ರವೇಶಿಸಿದ್ದು, ಆಗ ಅದನ್ನು ಪ್ರಶ್ನಿಸಿದ್ದ ಸೆಕ್ಯುರಿಟಿ ಗಾರ್ಡ್ಗೆ ಕೊಲೆ ಬೆದರಿಕೆ ಹಾಕಿದ್ದರು.
ಇದನ್ನೂ ಓದಿ: ಕೆಟ್ಟಿದ್ದ ಫ್ರಿಡ್ಜ್ ರಿಪೇರಿಗೆಂದು ಬಂದವ ಮನೆಯೊಡತಿಯನ್ನೇ ಕೆಡಿಸಲು ಯತ್ನಿಸಿದ; ಆಕೆಯ ಪುತ್ರಿಯೊಂದಿಗೂ ಅಸಭ್ಯವಾಗಿ ವರ್ತಿಸಿದ…
ಸೆಕ್ಯುರಿಟಿ ಗಾರ್ಡ್ಗೆ ಕೊಲೆ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಕ್ಲಬ್ ಕಾರ್ಯದರ್ಶಿ ನಾಗೇಂದ್ರ ಅವರು ರಾಮ್ಮೋಹನ್ ವಿರುದ್ಧ ಇಂದಿರಾನಗರ ಠಾಣೆಯಲ್ಲಿ ದೂರು ನೀಡಿದ್ದರು. ಆಗ ಪ್ರಕರಣ ದಾಖಲಿಸಿಕೊಂಡಿದ್ದ ಇನ್ಸ್ಪೆಕ್ಟರ್ ರಾಮಮೂರ್ತಿ, ಸೂಕ್ತ ತನಿಖೆ ನಡೆಸದೆ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ. ಅಲ್ಲದೆ ಬಿ-ರಿಪೋರ್ಟ್ ಸಲ್ಲಿಸುವ ಸಂಬಂಧ ರಾಮ್ಮೋಹನ್ರಿಂದ 10 ಲಕ್ಷ ರೂ. ಲಂಚ ಪಡೆದಿದ್ದಾರೆ ಎಂದು ಇನ್ಸ್ಪೆಕ್ಟರ್ ವಿರುದ್ಧ ನಾಗೇಂದ್ರ ಎಸಿಬಿಗೆ ದೂರು ನೀಡಿದ್ದರು. ಈ ದೂರನ್ನು ಪರಿಶೀಲಿಸಿದ ಎಸಿಬಿ ಅಧಿಕಾರಿಗಳು ಇನ್ಸ್ಪೆಕ್ಟರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
Video | ಕಲ್ಯಾಣಮಂಟಪದಲ್ಲೇ ಕೈ ಎತ್ತಿದ ಮದುಮಗ, ಬಿದ್ದುಬಿದ್ದು ನಕ್ಕಳು ಮದುಮಗಳು; ಎಲ್ಲದಕ್ಕೂ ಕಾರಣನು ಅವನು…
ಕತ್ತರಿಸಿದ ಗಾಯಕ್ಕೂ ಇನ್ನು ಹೊಲಿಗೆ ಬೇಕಾಗಿಲ್ಲ; ಸಜ್ಜಾಗಿದೆ ಗಾಯ ಮಾಯವಾಗಿಸೋ ಅಂಟು!