ರಾಜ್ಯದ 15 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಏಕಕಾಲಕ್ಕೆ 68 ತಂಡಗಳಲ್ಲಿ 500 ಕ್ಕೂ ಅಧಿಕ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಇಲ್ಲದೆ ಕೋಟಿ-ಕೋಟಿ ಹಣ, ಚಿನ್ನಾಭರಣ ಹಾಗೂ ಆಸ್ತಿ ದಾಖಲೆ ಪತ್ರಗಳು ಜಪ್ತಿಯಾಗಿದ್ದು, ಯಾರ ಆಸ್ತಿ ಎಷ್ಟು ಎಂಬ ವಿವರ ಇಲ್ಲಿದೆ.
ಟಿ.ಎಸ್. ರುದ್ರೇಶಪ್ಪ ಜಂಟಿ ನಿರ್ದೇಶಕರು, ಕೃಷಿ ಇಲಾಖೆ, ಗದಗ ಜಿಲ್ಲೆ
ಶಿವಮೊಗ್ಗದಲ್ಲಿ 2 ವಾಸದ ಮನೆ, ವಿವಿಧೆಡೆ 4 ನಿವೇಶನ, 9 ಕೆ.ಜಿ 400 ಗ್ರಾಂ ಚಿನ್ನದ ಬಿಸ್ಕೇಟ್, 3 ಕೆ.ಜಿ ಬೆಳಿ ್ಳ 2 ವಿವಿಧ ಕಂಪನಿ ಕಾರುಗಳು, 3 ದ್ವಿಚಕ್ರ ವಾಹನ, 8 ಎಕರೆ ಕೃಷಿ ಜಮೀನು, 15.94 ಲಕ್ಷ ನಗದು, 20 ಲಕ ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು.
ಅಡವಿ ಸಿದ್ದೇಶ್ವರ ಕಾರೆಪ್ಪ ಮಸ್ತಿ ಅಭಿವೃದ್ಧಿ ಅಧಿಕಾರಿ, ಸಹಕಾರ ಇಲಾಖೆ, ರಾಯಬಾಗ್ ತಾಲ್ಲೂಕು, ಬೆಳಗಾವಿ
ಬೈಲಹೊಂಗಲದಲ್ಲಿ 2 ವಾಸದ ಮನೆ, 4 ನಿವೇಶನಗಳು, 4 ವಿವಿಧ ಕಂಪನಿಯ ಕಾರುಗಳು, 6 ದ್ವಿಚಕ್ರ ವಾಹನಗಳು, 263 ಗ್ರಾಂ ಚಿನ್ನಾಭರಣ, 945 ಗ್ರಾಂ ಬೆಳ್ಳಿ, 1.50 ಲಕ್ಷ ರೂ. ಮೌಲ್ಯದ ಬ್ಯಾಂಕ್ ಡೆಪಾಸಿಟ್ ಮತ್ತು ಷೇರ್ಗಳು, 1.10 ಲಕ್ಷ ನಗದು, 5 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು.
ಶ್ರೀನಿವಾಸ್. ಕೆ. ಕಾರ್ಯಪಾಲಕ ಅಭಿಯಂತರರು, ಹೆಚ್ಎಲ್ಬಿಸಿ-3, ಕೆ.ಆರ್. ಪೇಟೆ ಸಬ್ ಡಿವಿಜನ್, ಮಂಡ್ಯ
ಮೈಸೂರಿನಲ್ಲಿ 1 ವಾಸದ ಮನೆ, 1 ಫ್ಲ್ಯಾಟ್, 2 ನಿವೇಶನ, ಮೈಸೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ 4 ಎಕರೆ 34 ಗುಂಟೆ ಕೃಷಿ ಜಮೀನು, ನಂಜನಗೂಡಿನಲ್ಲಿ 1 ಫಾಮ್ರ್ ಹೌಸ್, 2 ವಿವಿಧ ಕಂಪನಿ ಕಾರುಗಳು, 2 ದ್ವಿಚಕ್ರ ವಾಹನ, 1 ಕೆಜಿ ಚಿನ್ನ, 8 ಕೆ.ಜಿ 840 ಗ್ರಾಂ ಬೆಳ್ಳಿ, 9.85 ಲಕ್ಷ ನಗದು, ವಿವಿಧ ಬ್ಯಾಂಕ್ಗಳಲಿ ್ಲ 22 ಲಕ್ಷ ರೂ.ಗಳ ಠೇವಣಿ ಹಾಗೂ 8 ಲಕ್ಷ ರೂ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು.
ಮಾಯಣ್ಣ ಎಫ್ಡಿಎ, ಬಿಬಿಎಂಪಿ ಕೇಂದ್ರ ಕಚೇರಿ, ಎನ್. ಆರ್.ವೃತ್ತ, ಬೆಂಗಳೂರು
ಬೆಂಗಳೂರಿನಲ್ಲಿ 4 ವಾಸದ ಮನೆಗಳು, ವಿವಿಧ ಕಡೆಗಳಲ್ಲಿ 6 ನಿವೇಶನಗಳು, 2 ಎಕರೆ ಕೃಷಿ ಜಮೀನು, 2 ದ್ವಿಚಕ್ರ ವಾಹನಗಳು, 1 ಕಾರು, 59 ಸಾವಿರ ನಗದು, 10 ಲಕ್ಷ ರೂ. ನಿಶ್ಚಿತ ಠೇವಣಿ(ಎಫ್.ಡಿ), ಉಳಿತಾಯ ಖಾತೆ(ಎಸ್ಬಿ)ಯಲ್ಲಿ 1.50 ಲಕ್ಷ ರೂ.ಗಳು, 600 ಗ್ರಾಂ ಚಿನ್ನಾಭರಣ, 3 ಸ್ಥಳಗಳಲ್ಲಿ ಬೇನಾಮಿ ಆಸ್ತಿ, 12 ಲಕ್ಷ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು.
ಸದಾಶಿವ ರಾಯಪ್ಪ ಮರಲಿಂಗಣ್ಣನವರ್ ಹಿರಿಯ ಮೋಟಾರು ನಿರೀಕ್ಷಕ ಗೋಕಾಕ್, ಬೆಳಗಾವಿ
ಬೆಳಗಾವಿಯಲ್ಲಿ 1 ಮನೆ, 22 ಎಕರೆ ಕೃಷಿ ಜಮೀನು, 1 ಕೆ.ಜಿ 135 ಗ್ರಾಂ ಚಿನ್ನಾಭರಣ, 8.22 ಲಕ್ಷ ನಗದು, 5 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು.
ಎಸ್.ಎಸ್.ರಾಜಶೇಖರ್ ಪಿಸಿಯೋಥೆರಪಿಸ್ಟ್, ಸರ್ಕಾರಿ ಆಸ್ಪತ್ರೆ, ಯಲಹಂಕ, ಬೆಂಗಳೂರು
ಬೆಂಗಳೂರಿನ ಯಲಹಂಕದ ಮಾರಸಂದ್ರದಲ್ಲಿ 1 ಪ್ಲಾ್ಯಟ್, ಯಲಹಂಕದ ಶಿವನಹಳ್ಳಿಯಲ್ಲಿ 2 ಅಂತಸ್ತಿನ 1 ಪ್ಲಾ್ಯಟ್ ಮತ್ತು ತಳ ಮಹಡಿಯಲಿ ್ಲ ಖಾಸಗಿ ಆಸ್ಪತ್ರೆ, ಯಲಹಂಕದ ಮೈಲನಹಳಿ ್ಳುಲ್ಲಿ 1 ನಿವೇಶನ, 1 ಕಾರು, 1 ದಿ ್ವಕ್ರ ವಾಹನ ಹಾಗೂ 4 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು.
ಜಿ.ವಿ. ಗಿರಿ ಗ್ರೂಪ್-ಡಿ ನೌಕರ, ಬಿಬಿಎಂಪಿ ಬಾಲಕ ಮತ್ತು ಬಾಲಕಿಯರ ಹೈಸ್ಕೂಲ್, ಮಾರಪ್ಪನಪಾಳ್ಯ, ಯಶವಂತಪುರ, ಬೆಂಗಳೂರು.
ಬೆಂಗಳೂರಿನಲ್ಲಿ 6 ವಾಸದ ಮನೆಗಳು, 4 ವಿವಿಧ ಕಂಪನಿಯ ಕಾರುಗಳು, 4 ದ್ವಿಚಕ್ರ ವಾಹನಗಳು, 8 ಕೆ. ಜಿ ಬೆಳ್ಳಿ, 1.18 ಲಕ್ಷ ನಗದು, 15 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು.
ಬಿ. ಕೃಷ್ಣಾರೆಡ್ಡಿ ಪ್ರಧಾನ ವ್ಯವಸ್ಥಾಪಕರು, ನಂದಿನಿ ಹಾಲು ಉತ್ಪನ್ನಗಳು, ಬೆಂಗಳೂರು
ವಿವಿಧ ನಗರದಲ್ಲಿ 3 ವಾಸದ ಮನೆಗಳು, ವಿವಿಧ ಕಡೆಗಳಲ್ಲಿ 9 ನಿವೇಶನಗಳು, ಚಿಂತಾಮಣಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಒಟ್ಟು 5 ಎಕರೆ 30 ಗುಂಟೆ ಕೃಷಿ ಜಮೀನು, ಹೊಸಕೋಟೆಯಲ್ಲಿ 1 ಪೆಟ್ರೋಲ್ ಬಂಕ್, 383 ಗ್ರಾಂ ಚಿನ್ನಾಭರಣಗಳು, 3395 ಗ್ರಾಂ ಬೆಳ್ಳಿ, 3 ಲಕ್ಷ ರೂ. ನಗದು ಪತ್ತೆಯಾಗಿದೆ.
ಆರ್.ಎನ್.ವಾಸುದೇವ್. ಮಾಜಿ ಪ್ರಾಜೆಕ್ಟ್ ಡೈರೆಕ್ಟರ್ (ಯೋಜನಾ ನಿರ್ದೇಶಕರು), ನಿರ್ವಿುತಿ ಕೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ
ಬೆಂಗಳೂರಿನಲ್ಲಿ 5 ವಾಸದ ಮನೆಗಳು, ನೆಲಮಂಗಲದ ಸೋಂಪುರ ಗ್ರಾಮದಲ್ಲಿ 4 ಮನೆಗಳು, ಬೆಂಗಳೂರಿನಲ್ಲಿ 8 ನಿವೇಶನಗಳು, ನೆಲಮಂಗಲ ಹಾಗೂ ಮಾಗಡಿ ತಾಲೂಕಿನಲ್ಲಿ ಒಟ್ಟು 10 ಎಕರೆ 20 ಗುಂಟೆ ಕೃಷಿ ಜಮೀನು, 850 ಗ್ರಾಂ ಚಿನ್ನಾಭರಣಗಳು, 9 ಕೆಜಿ 500 ಗ್ರಾಂ ಬೆಳ್ಳಿ 15 ಲಕ್ಷ ರೂ. ನಗದು, 98 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು.
ಎಲ್.ಸಿ.ನಾಗರಾಜ್ ಆಡಳಿತಾಧಿಕಾರಿ, ಸಕಾಲ ಮಷೀನ್ ಬೆಂಗಳೂರು
ಬೆಂಗಳೂರಿನಲ್ಲಿ 1 ಮನೆ, ನಿವೇಶನ, ನೆಲಮಂಗಲದಲ್ಲಿ 1 ಮನೆ, 11 ಎಕರೆ 26 ಗುಂಟೆ ಜಮೀನು, ಕೈಗಾರಿಕಾ ಉದ್ದೇಶದ ಒಂದು ಕಟ್ಟಡ, 3 ವಿವಿಧ ಕಂಪನಿಯ ಕಾರುಗಳು, 1 ಕೆಜಿ 76 ಗ್ರಾಂ ಚಿನ್ನಾಭರಣ, 7 ಕೆ.ಜಿ 284 ಗ್ರಾಂ ಬೆಳಿ ್ಳ 43 ಲಕ್ಷ ರೂ. ನಗದು, 14 ಲಕ್ಷರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು.
ಲಕ್ಷ್ಮಿ ನರಸಿಂಹಯ್ಯ ರಾಜಸ್ವ ನಿರೀಕ್ಷಕರು, ಕಸಬಾ-2 ದೊಡ್ಡಬಳ್ಳಾಪುರ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ
ವಿವಿಧ ಕಡೆಗಳಲ್ಲಿ 5 ವಾಸದ ಮನೆಗಳು, ವಿವಿಧ ಕಡೆಗಳಲ್ಲಿ 6 ನಿವೇಶನಗಳು, ದೊಡ್ಡಬಳ್ಳಾಪುರದಲ್ಲಿ 25 ಗುಂಟೆ ಜಮೀನು, 765 ಗ್ರಾಂ ಚಿನ್ನಾಭರಣ, 15 ಕೆ.ಜಿ ಬೆಳ್ಳಿ 1 ಕಾರು, 2 ದ್ವಿಚಕ್ರ ವಾಹನಗಳು, 1.13 ಲಕ್ಷ ನಗದು ಪತ್ತೆಯಾಗಿದೆ.
ಕೆ.ಎಸ್.ಶಿವಾನಂದ್ ಸಬ್-ರಿಜಿಸ್ಟ್ರಾರ್ (ನಿವೃತ್ತ), ಬಳ್ಳಾರಿ
ಮಂಡ್ಯದಲ್ಲಿ 1 ವಾಸದ ಮನೆ, ಬೆಂಗಳೂರಿನಲ್ಲಿ 1 ಖಾಲಿ ನಿವೇಶನ, 1 ಕಾರು, 2 ದ್ವಿಚಕ್ರ ವಾಹನ, ಶಕ್ರಪುರ ಗ್ರಾಮದಲ್ಲಿ 1 ಸಂಕೀರ್ಣ, ಬಳ್ಳಾರಿ ಜಿಲೆ ್ಲ ಯ ಮೋಕಾ ಗ್ರಾಮದಲ್ಲಿ 7 ಎಕರೆ ಕೃಷಿ ಜಮೀನು, 8 ಲಕ್ಷ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು.
ನಾಥಾಜಿ ಪೀರಾಜಿ ಪಾಟೀಲ ಲೈನ್ ಮೆಕಾನಿಕ್ ಗ್ರೇಡ್-2, ಹೆಸ್ಕಾಂ, ಬೆಳಗಾವಿ
ಬೆಳಗಾವಿಯಲ್ಲಿ 1 ವಾಸದ ಮನೆ, 2 ನಿವೇಶನ, 1 ಕಾರು, 1 ದ್ವಿಚಕ್ರ ವಾಹನ, 239 ಗ್ರಾಂ ಚಿನ್ನಾಭರಣ, 1 ಕೆ.ಜಿ 803 ಗ್ರಾಂ ಬೆಳ್ಳಿ, 38 ಸಾವಿರ ನಗದು, 20 ಲಕ್ಷ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು.
ಕೆ.ಎಸ್.ಲಿಂಗೇಗೌಡ ಕಾರ್ಯಪಾಲಕ ಅಭಿಯಂತರರು, ಸ್ಮಾರ್ಟ್ ಸಿಟಿ, ಮಂಗಳೂರು
ಮಂಗಳೂರಿನಲ್ಲಿ 1 ಮನೆ, ಚಾಮರಾಜನಗರ ಮತ್ತು ಮಂಗಳೂರಿನಲ್ಲಿ 3 ನಿವೇಶನ, 2 ವಿವಿಧ ಕಂಪನಿಯ ಕಾರುಗಳು, 1 ದಿ ್ವಕ್ರ ವಾಹನ, 1 ಕೆ. ಜಿ ಬೆಳ್ಳಿ ಆಭರಣಗಳು, 10 ಲಕ್ಷ ರೂ ಬೆಲೆ ಬಾಳುವ ಗೃಹೋಪಯೋಗಿ ವಸ್ತುಗಳು ಸಿಕ್ಕಿವೆ.
ಎಸ್.ಎಂ. ಬಿರಾದಾರ್ ಕಿರಿಯ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಜೇವರ್ಗಿ
ಕಲಬುರಗಿಯಲ್ಲಿ 2 ವಾಸದ ಮನೆ, ಬೆಂಗಳೂರಲ್ಲಿ 1 ನಿವೇಶನ, 3 ವಿವಿಧ ಕಂಪನಿ ಕಾರುಗಳು, 1 ದಿ ್ವಕ್ರ ವಾಹನ, 1 ಸ್ಕೂಲ್ ಬಸ್, 2 ಟ್ರಾಕ್ಟರ್ಗಳು, 54.50 ಲಕ್ಷ ನಗದು, 100 ಗ್ರಾಂ ಚಿನ್ನ, 36 ಎಕರೆ ಕೃಷಿ ಜಮೀನು, 15 ಲಕ್ಷ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿವೆ.
ಏಳು ಕಿಲೋಗಿಂತ ಹೆಚ್ಚು ಚಿನ್ನಾಭರಣ! ಎಸಿಬಿ ಅಧಿಕಾರಿಗಳ ದಾಳಿ ಸಮಯದಲ್ಲಿ ಪತ್ತೆ; ಇಲ್ಲಿದೆ ಅದರ ವಿಡಿಯೋ