ಹೊಸೂರು: ರಾಜ್ಯದ ಗಡಿಭಾಗ ತಮಿಳುನಾಡಿನ ಹೊಸೂರಿನಲ್ಲಿ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ದ್ವಿಚಕ್ರವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿದ್ದು, ನಾಲ್ಕು ತಿಂಗಳ ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ.
ಅನ್ಬು, ಸರಿತಾ ಅಪಘಾತದಲ್ಲಿ ಮೃತ ಪಟ್ಟ ದಂಪತಿಗಳು. ಲಾರಿ ಚಾಲಕರ ಅಜಾಗರೂಕತೆಯಿಂದಾಗಿ ಈ ಅಪಘಾತ ನಡೆದಿದ್ದು, ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹೆದ್ದಾರಿಯಲ್ಲಿ ಏಕಾಏಕಿ ಯುಟರ್ನ್ ತೆಗೆದುಕೊಳ್ಳಲು ಮುಂದಾದ ಟ್ಯಾಂಕರ್ ಚಾಲಕ ದ್ವಿಚಕ್ರ ವಾಹನ ಬರುತ್ತಿರುವುದನ್ನೂ ಲೆಕ್ಕಿಸದೇ ಡಿ್ಕಕಿ ಹೊಡೆದಿದ್ದರಿಂದ ಈ ಅನಾಹುತ ಸಂಭವಿಸಿದೆ.
4 ತಿಂಗಳ ಮಗುವಿನ ಜೊತೆ ಬೈಕ್ ನಲ್ಲಿ ಊರಿಗೆ ಹೊರಟಿದ್ದ ದಂಪತಿ ಮಸಣ ಸೇರಿದ್ದು ದುರದೃಷ್ಟವೇ ಸರಿ. ಸಣ್ಣ ಪುಟ್ಟ ಗಾಯಗಳಾಗಿದ್ದ ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. (ದಿಗ್ವಿಜಯ ನ್ಯೂಸ್)
ಭಾರೀ ಮಳೆ ಅವಾಂತರ: ಕೊಡಗು ಜಿಲ್ಲೆಗೆ ಇಂದಿನಿಂದ ಈ ವಾಹನಗಳಿಗಿಲ್ಲ ಪ್ರವೇಶ, ಜಿಲ್ಲಾಧಿಕಾರಿಗಳಿಂದ ಆದೇಶ
ಅಮರನಾಥದಲ್ಲಿ ಮೇಘಸ್ಫೋಟ: ಬಂಟ್ವಾಳದ 30 ಯಾತ್ರಿಕರ ತಂಡ ಸೇಫ್, ನಾಳೆ ಸಿಗಲಿದೆ ದರ್ಶನ ಭಾಗ್ಯ