More

    ಪಾದಚಾರಿಗಳಿಗೆ ಕಾರು ಡಿಕ್ಕಿ ಬಾಲಕಿ ಸಾವು

    ಪುತ್ತೂರು: ಪುತ್ತೂರು ದರ್ಬೆ ಬೈಪಾಸ್ ಬಳಿ ಸೋಮವಾರ ಮಧ್ಯಾಹ್ನ ಪಾದಚಾರಿಗಳಿಗೆ ಕಾರು ಡಿಕ್ಕಿಯಾಗಿ ಒಂಬತ್ತು ವರ್ಷದ ಬಾಲಕಿ ಮೃತಪಟ್ಟಿದ್ದು, ಮಹಿಳೆ ಮತ್ತು ಆರು ವರ್ಷದ ಬಾಲಕನಿಗೆ ಗಾಯವಾಗಿದೆ.

    ಮಂಗಳೂರಿನಿಂದ ಸುಳ್ಯದತ್ತ ಚಲಿಸುತ್ತಿದ್ದ ಕೇರಳ ನೋಂದಣಿಯ ಕಾರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳು, ಮಹಿಳೆಗೆ ಡಿಕ್ಕಿಯಾಗಿದೆ. ಬಳಿಕ ಎದುರಿನಲ್ಲಿದ್ದ ಕಾರೊಂದಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿತ್ತು. ಕೂಡಲೇ ಮೂವರನ್ನು ಸ್ಥಳೀಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ಒಂಬತ್ತು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಇನ್ನೊಂದು ಮಗು ಗಂಭೀರ ಗಾಯಗೊಂಡಿದೆ. ಮಗುವನ್ನು ಮಂಗಳೂರಿನ ಆಸ್ಪತ್ರೆಗೆ ಕರೆತರಲಾಗುತ್ತಿದ್ದು, ಮಹಿಳೆಗೆ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಸ್ಥಳಕ್ಕೆ ಪುತ್ತೂರು ನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಬಾಲಕಿ ಪುತ್ತೂರಿನ ಮಾಜಿ ಕೌನ್ಸಿಲರೊಬ್ಬರ ಸಂಬಂ ಎಂದು ಪೊಲೀಸರು ವಿಜಯವಾಣಿಗೆ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts