ಕಾರು ಮಗುಚಿ ಮೂವರಿಗೆ ಗಾಯ

blank

 ನಂಜನಗೂಡಿನಿಂದ ದರ್ಶನಕ್ಕೆ ಬರುತ್ತಿದ್ದ ಕುಟುಂಬ

ಹನೂರು : ತಾಲೂಕಿನ ಕೌದಳ್ಳಿ ಸಮೀಪದ ಎಂ.ಜಿ.ದೊಡ್ಡಿ ಬಳಿ ಮಂಗಳವಾರ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮಗುಚಿ ಬಿದ್ದು ಮೂವರು ಗಾಯಗೊಂಡಿದ್ದಾರೆ. ನಂಜನಗೂಡು ತಾಲೂಕಿನ ಕೌಲಂದೆ ಗ್ರಾಮದ ಮಂಜುಳಾ, (38) ಈಕೆಯ ಪತಿ ಪ್ರಕಾಶ್ (45) ಹಾಗೂ ಪುತ್ರ ಸಚಿನ್ (20) ಗಾಯಗೊಂಡವರು. ಇವರೆಲ್ಲರೂ ಮಧ್ಯಾಹ್ನ ದೇವರ ದರ್ಶನಕ್ಕಾಗಿ ಮ.ಬೆಟ್ಟಕ್ಕೆ ಕಾರಿನಲ್ಲಿ ತೆರಳುತ್ತಿದ್ದರು.ಎಂ.ಜಿ ದೊಡ್ಡಿ ಬಳಿ ರಸ್ತೆಗೆ ಅಡ್ಡಲಾಗಿ ಬಂದ ಹಾವನ್ನು ರಕ್ಷಿಸುವ ಭರದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿತು. ಗಾಯಗೊಂಡ ಮೂವರನ್ನೂ ಸ್ಥಳೀಯರು ಕೌದಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ನೆರವಾದರು. ಸ್ಥಳಕ್ಕಾಗಮಿಸಿದ ಹೊಯ್ಸಳ ಪೊಲೀಸರು ಪರಿಶೀಲಿ ತುರ್ತು ವಾಹನದ ಮೂಲಕ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆಗೆ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ದಾಖಲಿಸಿದರು. ರಾಮಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article

ಐಸ್​​ಕ್ಯೂಬ್​​ನಿಂದ ಮುಖಕ್ಕೆ ಮಸಾಜ್ ಮಾಡಿದ್ರೆ ನಿಮ್ಮ ಸೌಂದರ್ಯ ಹೆಚ್ಚುತ್ತದೆ! ತಜ್ಞರು ಏನು ಹೇಳುತ್ತಾರೆ? Ice cube Remedy

Ice cube Remedy : ಮುಖ ಸುಂದರವಾಗಿ ಕಾಣಲು ಅನೇಕ ಜನರು ವಿವಿಧ ಸಲಹೆಗಳನ್ನು ಅನುಸರಿಸುತ್ತಾರೆ.…

ಈ ನಕ್ಷತ್ರದಲ್ಲಿ ಹುಟ್ಟಿದ ಗಂಡಸರು ತಮ್ಮ ಪತ್ನಿಯರನ್ನು ರಾಜಕುಮಾರಿಯಂತೆ ನೋಡಿಕೊಳ್ಳುತ್ತಾರೆ! Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon

watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು  ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…