More

    750 ರೂ ಕಟ್ಟಿದವರಿಗೆ 20 ಲಕ್ಷ ರೂ ಪರಿಹಾರ: ಸಂತ್ರಸ್ತರಿಗೆ ನೆರವಾದ ಬ್ಯಾಂಕ್ ಅಪಘಾತ ವಿಮೆ

    ಮಂಡ್ಯ: ಕುಟುಂಬಕ್ಕೆ ಆಧಾರವಾಗಿದ್ದ ಮಗನನ್ನು ಅಪಘಾತದಲ್ಲಿ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದವರ ನೆರವಿಗೆ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಬಂದಿದೆ. 750 ರೂ ಕಟ್ಟಿದ್ದ ಅಪಘಾತ ವಿಮೆಗೆ ಹಿನ್ನೆಲೆಯಲ್ಲಿ ಬ್ಯಾಂಕ್‌ನಿಂದ 20 ಲಕ್ಷ ರೂಗಳ ಪರಿಹಾರ ನೀಡಿದೆ. ಈ ವಿಮೆ ಯೋಜನೆ ಸಂಬಂಧಿಸಿದಂತೆ ಇದು ದೇಶದಲ್ಲಿಯೇ ಮೊದಲ ಪ್ರಕರಣವೆಂದು ಬ್ಯಾಂಕ್‌ನ ಅಧಿಕಾರಿಗಳು ತಿಳಿಸಿದ್ದಾರೆ.
    ತಾಲೂಕಿನ ಆಲಕೆರೆ ಗ್ರಾಮದ ಮಾಚಲಪ್ಪ ಮತ್ತು ಮಹದೇವಮ್ಮ ಎಂಬುವರ ಮಗ ಅವಿನಾಶ್(30) ಕೆಲ ತಿಂಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬ ಕಷ್ಟಕ್ಕೆ ಸಿಲುಕಿತ್ತು. ಈ ನಡುವೆ ಅಪಘಾತ ವಿಮೆ ನೆರವಿಗೆ ಬಂದಿದ್ದು, ಪರಿಹಾರದ ಹಣ ಕುಟುಂಬದ ಕೈ ಸೇರಿದೆ.
    ಅವಿನಾಶ್ ಇಂಡಿಯರ್ ಓವರ್‌ಸೀಸ್ ಬ್ಯಾಂಕ್‌ನ ಕೀಲಾರ ಶಾಖೆಯಲ್ಲಿ ಅಪಘಾತ ವಿಮೆ ಕಟ್ಟಿದ್ದರು. ಅದರಂತೆ ವಾರ್ಷಿಕ 750 ರೂ ಮೊದಲ ಕಂತನ್ನು ಪಾವತಿಸಿದ್ದರು. ಈ ಹಿನ್ನೆಲೆಯಲ್ಲಿ ವಿಮೆ ಯೋಜನೆಯಂತೆ ನೊಂದ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ. ಮಂಗಳವಾರ ಕೀಲಾರ ಗ್ರಾಮದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮೈಸೂರು ಡಿವಿಷನ್ ಮ್ಯಾನೇಜರ್ ವಿಕಾಶ್‌ವರ್ಮಾ, ಅಧಿಕಾರಿ ಮೀನಾಕ್ಷಿ, ಕೀಲಾರ ಶಾಖೆಯ ವ್ಯವಸ್ಥಾಪಕ ನಿರ್ದೇಶಕ ಜಯಕೃಷ್ಣ, ಸಹಾಯಕ ವ್ಯವಸ್ಥಾಪಕ ಮಹಾವೀರ್‌ಸಿಂಗ್ ನೇತೃತ್ವದಲ್ಲಿ ಮಹದೇವಮ್ಮ ಅವರಿಗೆ ಚೆಕ್ ವಿತರಣೆ ಮಾಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts