ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ.
ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ.
ಕಳೆದ 15 ದಿನದಿಂದ ಸಾವು ಬದುಕಿನ ನಡುವೆ ಹೋರಾಟ ಮಾಡಿ ಶುಕ್ರವಾರ ಮೃತಪಟ್ಟಿದ್ದಾನೆ. ಹಾಸನದ ಹಿಮ್ಸ್ ಕಾಲೇಜಿನಲ್ಲಿ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ.