More

    ಖಡ್ಗ ಪ್ರದರ್ಶಿಸಿ ಯತ್ನಾಳ್​ ಗೆಲುವು ಸಂಭ್ರಮಿಸಿದ ಬೆಂಬಲಿಗ; ಆರೋಪಿ ಬಂಧನ

    ವಿಜಯಪುರ: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ.

    ಇನ್ನು ವಿಜಯಪುರದಲ್ಲಿ ಬಿಜೆಪಿಯಿಂದ ಪುನರಾಯ್ಕೆಯಾದ ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​ ಬೆಂಬಲಿಗರ ಸಂಭ್ರಮಾಚರಣೆ ವೇಳೆ ಮುಖಂಡನೊಬ್ಬ ತಲ್ವಾರ್​ ಹಿಡಿದು ರಸ್ತೆ ತುಂಬಾ ಓಡಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

    ಇದನ್ನೂ ಓದಿ: ಖಡ್ಗ ಪ್ರದರ್ಶಿಸಿ ಯತ್ನಾಳ್​ ಗೆಲುವು ಸಂಭ್ರಮಿಸಿದ ಬೆಂಬಲಿಗ!

    ಆರೋಪಿ ಬಂಧನ

    ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ವ್ಯಾಪಕ ಟೀಕೆ ಹಾಗೂ ಖಂಡನೆ ವ್ಯಕ್ತವಾದ ಬೆನ್ನಲ್ಲೇ ಆರೋಪಿಯನ್ನು ಬಂಧಿಸಲಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್​ ಕುಮಾರ್​ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

    ಖಡ್ಗ ಪ್ರದರ್ಶಿಸಿ ಯತ್ನಾಳ್​ ಗೆಲುವು ಸಂಭ್ರಮಿಸಿದ ಬೆಂಬಲಿಗ; ಆರೋಪಿ ಬಂಧನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts