ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿಯಿಂದ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ ಮತ್ತು ಇತರ ಆರೋಪಿಗಳು ಇಂದು ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.
ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಚೈತ್ರಾ ಹಾಗೂ ಇತರ ಆರೋಪಿಗಳನ್ನು ಇಂದು ಕೆಎಸ್ಆರ್ಪಿ ಬಸ್ನಲ್ಲಿ ಪೊಲೀಸರು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಕರೆದುಕೊಂಡು ಬಂದಿದ್ದಾರೆ. ಸಂಜೆ 6 ಗಂಟೆ ಸುಮಾರಿಗೆ ಈ ಟೀಮ್ ಜೈಲ್ಗೆ ಎಂಟ್ರಿ ಆಗಿದೆ.
ಮೂರನೇ ಎಸಿಎಂಎಂ ನ್ಯಾಯಾಧೀಶರ ಆದೇಶದ ಪ್ರಕಾರ ಈ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚೈತ್ರಾಳನ್ನು ಹೊಸ ಜೈಲಿನ ಮಹಿಳಾ ಬ್ಯಾರಕ್ನಲ್ಲಿ ಇರಿಸಲಾಗಿದ್ದು, ಇತರ ಆರೋಪಿಗಳಾದ ಗಗನ್ ಕಡೂರ್, ಪ್ರಜ್ವಲ್, ರಮೇಶ್, ಚೆನ್ನಾನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಪುರುಷರ ಸೆಲ್ನಲ್ಲಿದ್ದಾರೆ. ಇಂದಿನಿಂದ ಹತ್ತು ದಿನಗಳ ಕಾಲ ಇವರು ಜೈಲುವಾಸ ಅನುಭವಿಸಬೇಕಾಗಿದೆ.
ಕೋಚಿಂಗ್ ವಿದ್ಯಾರ್ಥಿಗಳ ಸುside ಬಗ್ಗೆಯೂ ನಡೆಯಿತು ಪಿಎಚ್ಡಿ; ಅಧ್ಯಯನದಲ್ಲಿ ಕಂಡುಬಂದ ಅಂಶಗಳಿವು!
ಸೂಕ್ತ ಎಚ್ಚರಿಕೆ ವಹಿಸದಿದ್ದರೆ ಮುಂದಿನ ಕೆಲವು ವರ್ಷಗಳಲ್ಲಿ 7.6 ಕೋಟಿ ಸಾವು ಸಾಧ್ಯತೆ!