ಬೆಂಗಳೂರು: ಡಿಜೆ ಹಳ್ಳಿ ಗಲಭೆಗೆ ಮೂಲ ಕಾರಣ ಎನ್ನಲಾದ ಆರೋಪಿ ನವೀನ್ ಕೊನೆಗೂ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.
ಶಾಸಕ ಅಖಂಡ ಶ್ರೀನಿವಾಸ್ ಅಕ್ಕನ ಮಗನಾಗಿರುವ ಆರೋಪಿ ನವೀನ್ ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಆರೋಪ ಕೇಳಿಬಂದಿತ್ತು. ಇದು ಗಲಭೆಗೂ ಕಾರಣವಾಗಿತ್ತು.
ಈ ಮೊದಲು ಮೊಬೈಲ್ ಫೋನ್ ಕಳೆದುಹೋಗಿದೆ ಹಾಗೂ ಫೇಸ್ಬುಕ್ ಹ್ಯಾಕ್ ಆಗಿದೆ ಎಂದು ನವೀನ್ ಹೇಳಿಕೆ ನೀಡಿದ್ದ. ಇದೀಗ ತಪ್ಪೊಪ್ಪಿಕೊಂಡಿರುವ ನವೀನ್, ಫೇಸ್ಬುಕ್ನಲ್ಲಿ ಸ್ಟೆಟಸ್ ಹಾಕಿಕೊಂಡಿದ್ದು ನಾನೇ ಎಂದು ಹೇಳಿದ್ದಾನೆ.
ಮಹಮ್ಮದ್ ಪೈಗಂಬರ್ ಬಗ್ಗೆ ಕೆಟ್ಟದಾಗಿ ಸ್ಟೇಟಸ್ ಹಾಕಿ ಬಳಿಕ ಡಿಲೀಟ್ ಮಾಡಿದ್ದಾಗಿ ನವೀನ್ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. (ದಿಗ್ವಿಜಯ ನ್ಯೂಸ್)