More

    ಡಿಜೆ ಹಳ್ಳಿ ಗಲಭೆ ಪ್ರಕರಣ: ಕೊನೆಗೂ ತಪ್ಪೊಪ್ಪಿಕೊಂಡ ಆರೋಪಿ ನವೀನ್!

    ಬೆಂಗಳೂರು: ಡಿಜೆ ಹಳ್ಳಿ ಗಲಭೆಗೆ ಮೂಲ ಕಾರಣ ಎನ್ನಲಾದ ಆರೋಪಿ ನವೀನ್​ ಕೊನೆಗೂ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

    ಶಾಸಕ ಅಖಂಡ ಶ್ರೀನಿವಾಸ್​ ಅಕ್ಕನ ಮಗನಾಗಿರುವ ಆರೋಪಿ ನವೀನ್​ ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಆರೋಪ ಕೇಳಿಬಂದಿತ್ತು. ಇದು ಗಲಭೆಗೂ ಕಾರಣವಾಗಿತ್ತು.

    ಈ ಮೊದಲು ಮೊಬೈಲ್​ ಫೋನ್​ ಕಳೆದುಹೋಗಿದೆ ಹಾಗೂ ಫೇಸ್​ಬುಕ್​ ಹ್ಯಾಕ್​ ಆಗಿದೆ ಎಂದು ನವೀನ್​ ಹೇಳಿಕೆ ನೀಡಿದ್ದ. ಇದೀಗ ತಪ್ಪೊಪ್ಪಿಕೊಂಡಿರುವ ನವೀನ್​, ಫೇಸ್​ಬುಕ್​ನಲ್ಲಿ ಸ್ಟೆಟಸ್ ಹಾಕಿಕೊಂಡಿದ್ದು ನಾನೇ ಎಂದು ಹೇಳಿದ್ದಾನೆ.

    ಮಹಮ್ಮದ್ ಪೈಗಂಬರ್ ಬಗ್ಗೆ ಕೆಟ್ಟದಾಗಿ ಸ್ಟೇಟಸ್ ಹಾಕಿ ಬಳಿಕ ಡಿಲೀಟ್​ ಮಾಡಿದ್ದಾಗಿ ನವೀನ್​ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts