ಮಂಗಳೂರು: ತುಳು ಚಿತ್ರರಂಗದ ನಟ ಸುರೇಂದ್ರ ಬಂಟ್ವಾಳ್ ಕೊಲೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಟ್ವಾಳದ ಸತೀಶ್ ಕುಲಾಲ್, ಕಿನ್ನಿಗೋಳಿಯ ಗಿರೀಶ್ ಬಂಧಿತರು.
ಕೊಲೆ ಆರೋಪಿಗಳು ಶನಿವಾರ ತಡರಾತ್ರಿ ಕಾಸರಗೋಡು ಕಡೆಯಿಂದ ಬಾಡಿಗೆ ಕಾರಿನಲ್ಲಿ ಬರುತ್ತಿದ್ದಾಗ ಡಿವೈಎಸ್ಪಿ ವೆಲೆಂಟೈನ್ ಡಿಸೋಜಾ ನೇತೃತ್ವದ ತಂಡ ಕಾರನ್ನು ತಡೆದು ಆರೋಪಿಗಳನ್ನು ಬಂಧಿಸಿದೆ.
ನಟ ಸುರೇಂದ್ರ ಅವರನ್ನು ಅ.20ರಂದು ಬಿ.ಸಿ.ರೋಡ್ನಲ್ಲಿರುವ ಫ್ಲ್ಯಾಟ್ನಲ್ಲಿ ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣ ಅ.21ರಂದು ಮಧ್ಯಾಹ್ನ ಬೆಳಕಿಗೆ ಬಂದಿತ್ತು.