ಬೆಂಗಳೂರು: ಪ್ರೀತಿಸಲು ನಿರಾಕರಿಸಿದಳು ಎನ್ನುವ ಕಾರಣಕ್ಕೆ ಅಮಾಯಕ ಯುವತಿಯ ಮೇಲೆ ಆ್ಯಸಿಡ್ ದಾಳಿ ಮಾಡಿ ಆಕೆಯ ಬದುಕನ್ನು ದುಃಖದ ಸಾಗರಕ್ಕೆ ದೂಡಿರುವ ಆ್ಯಸಿಡ್ ನಾಗನಿಗೆ ವಿಧಿಯೇ ಘನ ಘೋರ ಶಿಕ್ಷೆಯನ್ನು ವಿಧಿಸಿದೆ. ಕರ್ಮದ ಫಲದಿಂದ ಯಾರೂ ಕೂಡ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.
ಪ್ರೀತಿಸಲು ಒಲ್ಲೆ ಎಂದ 24 ವರ್ಷದ ಯುವತಿ ಮೇಲೆ ಏ.28ರ ಗುರುವಾರ ಬೆಳಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯ ಮುತ್ತೂಟ್ ಫೈನಾನ್ಸ್ ಬಳಿ ಭಗ್ನಪ್ರೇಮಿ ನಾಗೇಶ್ ಆ್ಯಸಿಡ್ ಹಾಕಿ ಪರಾರಿಯಾಗಿದ್ದ. ಈ ಘಟನೆ ಇಡೀ ರಾಜ್ಯವನ್ನೆ ಬೆಚ್ಚಿಬೀಳಿಸಿತ್ತು. ತುಂಬಾ ನೋವಿನಿಂದ ರಸ್ತೆಯಲ್ಲಿ ಬಿದ್ದು ನರಳಾಡಿದ ಯುವತಿಯನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು. ಸಾವು-ಬದುಕಿನ ನಡುವೆ ಹೋರಾಡಿದ ಯುವತಿ, ಇದೀಗ ಕೊಂಚ ಚೇತರಿಸಿಕೊಳ್ಳುತ್ತಿದ್ದಾಳೆ.
ಆ್ಯಸಿಡ್ ಎರಚಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡು 16 ದಿನಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದು ಜೈಲು ಕಂಬಿ ಎಣಿಸುತ್ತಿರುವ ನಾಗೇಶನಿಗೆ ಇದೀಗ ವಿಧಿಯೇ ಘೋರ ಶಿಕ್ಷೆಯನ್ನು ನೀಡಿದೆ. ಆರೋಪಿ ನಾಗೇಶ್ ಗ್ಯಾಂಗ್ರಿನ್ ಕಾಯಿಲೆಯಿಂದ ಬಳಲುತ್ತಿದ್ದಾನೆ. ಗ್ಯಾಂಗ್ರಿನ್ನಿಂದಾಗಿ ಕಾಣಿಸಿಕೊಂಡಿರುವ ನೋವಿನಿಂದ ವಿಲ ವಿಲ ಒದ್ದಾಡುತ್ತಿದ್ದಾನೆ. ತೀವ್ರ ನೋವು ಅನುಭವಿಸುತ್ತಿದ್ದು, ಇದೀಗ ಆತನಿಗೆ ಚಿಕಿತ್ಸೆ ಕೊಡಿಸಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. (ದಿಗ್ವಿಜಯ ನ್ಯೂಸ್)
ಭಾವಿ ಪತಿಯ ಮೊದಲ ಮದುವೆಯಲ್ಲಿ ಹನ್ಸಿಕಾರ ಭರ್ಜರಿ ಡಾನ್ಸ್! ಸಿಕ್ಕಾಪಟ್ಟೆ ವೈರಲ್ ಆಗ್ತಿದೆ ವಿಡಿಯೋ