More

    ಪೈಶಾಚಿಕ ಕೃತ್ಯ ಎಸಗಿ ಸಮಾಜದ ಸ್ವಾಸ್ಥ್ಯ ಹಾಳು

    ಸಿಂಧನೂರು: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಗಾರನಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಮುಂದೆ ಇಂಥ ಘಟನೆಗಳು ನಡೆಯದಂತೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಉಪತಹಸೀಲ್ದಾರ್ ಚಂದ್ರಶೇಖರಗೆ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ಶನಿವಾರ ಮನವಿ ಸಲ್ಲಿಸಿತು.

    ಬಿವಿಬಿ. ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠರನ್ನು ಫಯಾಜ್ ಎನ್ನುವವನು ಕೊಲೆ ಮಾಡಿ ವಿಕೃತಿ ಮೆರೆದಿದ್ದಾನೆ. ಇಂಥ ಪೈಶಾಚಿತ ಕೃತ್ಯ ಎಸಗಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಿ, ಮಹಿಳೆಯರು ವಿದ್ಯಾರ್ಥಿನಿಯರು ಭಯದ ವಾತಾವರಣದಲ್ಲಿ ಸಿಲುಕುವಂತೆ ಮಾಡಿರುವ ಫಯಾಜ್‌ನನ್ನು ಕೂಡಲೇ ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.

    ರಾಜ್ಯದ ಎಲ್ಲ ಕಾಲೇಜು ಹಾಗೂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರಿಗೆ ವಿಶೇಷ ಭದ್ರತೆ ಒದಗಿಸಬೇಕು. ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಹಾಗೂ ಕೊಲೆ ಮಾಡುವವರಿಗೆ ಎನ್‌ಕೌಂಟರ್ ಮಾಡುವ ಕಾನೂನು ಜಾರಿಗೊಳಿಸಬೇಕೆಂದು ಒತ್ತಾಯಿಸಲಾಯಿತು. ಪ್ರಮುಖರಾದ ಬಸವರಾಜ ಬುಕ್ಕನಟ್ಟಿ, ಆಲಂಬಾಷಾ ಬೂದಿಹಾಳ, ಮಂಜುನಾಥ ಸಾಸಲಮರಿ, ನರಸಪ್ಪ ಅಮರಾಪುರ, ಅಮರೇಗೌಡ ಜಾಲವಾಡಗಿ, ಶಿವರಾಜ್ ಕೆ, ಶ್ರೀ ಕನಕದಾಸ ಬಿ.ಇಡಿ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts