More

    ಅಂಗಡಿಕಾರರಿಗೆ ತೊಂದರೆಯಾಗದಂತೆ ಕ್ರಮ

    ಹಳಿಯಾಳ: ಗೂಡಂಗಡಿಕಾರರಿಗೆ ಬದಲಿ ವ್ಯವಸ್ಥೆ ಕಲ್ಪಿಸಿ, ಯಾರಿಗೂ ತೊಂದರೆ ಆಗದಂತೆ ಹಂತ ಹಂತವಾಗಿ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಪುರಸಭೆ ಆಡಳಿತಾಧಿಕಾರಿ ಜಯಲಕ್ಷ್ಮಿ ರಾಯಕೋಡ ಹೇಳಿದರು.

    ಪಟ್ಟಣದ ಪುರಭವನದಲ್ಲಿ ಬುಧವಾರ ತಾಲೂಕು ಆಡಳಿತ, ಪುರಸಭೆ ಹಾಗೂ ಪೊಲೀಸ್ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.

    ಸಭೆಯಲ್ಲಿ ಹಲವು ಚರ್ಚೆ-ಸಲಹೆಗಳ ಬಳಿಕ, ಗೂಡಂಗಡಿಗಳನ್ನು ವ್ಯವಸ್ಥಿತವಾಗಿ ಇರಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸಲಾಗುವುದು ಎಂದರು.

    ಸಭೆಯಲ್ಲಿ ತಹಸೀಲ್ದಾರ್ ಜಿ. ಕೆ. ರತ್ನಾಕರ, ಪುರಸಭೆ ಮುಖ್ಯಾಧಿಕಾರಿ ಅಶೋಕ ಸಾಳೇನ್ನವರ, ಪಿಎಸ್​ಐ ವಿನೋದ ರೆಡ್ಡಿ, ಪುರಸಭೆ ಸದಸ್ಯ ಉದಯ ಹೂಲಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts