More

    ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರು ಪೂರೈಕೆಗೆ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

    ಬೆಳಗಾವಿ: ನದಿಗಳಲ್ಲಿ ಅನಧಿಕೃತ ಪಂಪ್ ಸೆಟ್ ಮೂಲಕ ನೀರು ಎತ್ತುತ್ತಿರುವುದು ಕಂಡು ಬರುತ್ತಿದೆ. ಕೂಡಲೇ ಪರಿಶೀಲಿಸಿ ಅಂತಹ ಪಂಪಸೆಟ್ ವಶಪಡಿಸಿಕೊಂಡು ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ತೊಂದರೆ ಕಂಡುಬರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಬರ ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಕೃಷ್ಣಾ ನದಿಯಲ್ಲಿ ಮತ್ತು ಕೆರೆಗಳಲ್ಲಿ ಅನಧಿಕೃತವಾಗಿ ಪಂಪ್ ಸೆಟ್ ಮೂಲಕ ನೀರು ಬಳಕೆ ಮಾಡುತ್ತಿರುವ ಕುರಿತು ಸಾಕಷ್ಟು ದೂರುಗಳು ಕೇಳಿಬಂದಿವೆ. ಅವುಗಳನ್ನು ಕೂಡಲೇ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಯಾವುದೇ ತೊಂದರೆ ಎದುರಾದಲ್ಲಿ ಪೊಲೀಸ್ ಇಲಾಖೆಯ ಸಹಾಯ ಪಡೆದು ಕೂಡಲೇ ತೆರವುಗೊಳಿಸಬೇಕು ಎಂದು ತಿಳಿಸಿದರು.

    ಅಥಣಿ, ಕಾಗವಾಡ ತಾಲೂಕುಗಳಲ್ಲಿ ಕುಡಿಯುವ ನೀರಿನ ತೊಂದರೆಯಿದೆ. ಹೆಚ್ಚಿನ ಸಮಯ ತ್ರಿ-ಫೇಸ್ ವಿದ್ಯುತ್ ಪೂರೈಕೆಗೆ ರೈತರಿಂದ ಬೇಡಿಕೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ದಿನದಲ್ಲಿ 4 ಗಂಟೆಗಳ ಕಾಲ ತ್ರಿ-ಫೇಸ್ ವಿದ್ಯುತ್ ಒದಗಿಸಲು ಸೂಕ್ತವಾಗಿದೆ ಎಂದು ಹೇಳಿದರು.

    ಅಥಣಿ, ಚಿಕ್ಕೊಡಿ ತಾಲೂಕಿನಲ್ಲಿ ಈಗಾಗಲೇ ಟೆಂಡರ್ ಮೂಲಕ ಜಾನುವಾರುಗಳಿಗೆ ಮೇವು ಸರಬರಾಜು ಮಾಡಲಾಗುತ್ತಿದೆ. ಪ್ರತಿ ಕೆಜಿಗೆ 2 ರೂಪಾಯಿಯಂತೆ ರೈತರಿಗೆ ಮೇವು ಹಂಚಿಕೆ ಮಾಡಬೇಕು.

    ಕುಡಿಯುವ ನೀರಿನ ತೊಂದರೆ, ಜಾನುವಾರುಗಳಿಗೆ ಮೇವು ಹಂಚಿಕೆ ಸೇರಿದಂತೆ ಬರ ನಿರ್ವಹಣೆಯಲ್ಲಿ ಯಾವುದೇ ತೊಂದರೆ ಎದುರಾಗದಂತೆ ಕಾರ್ಯ ನಿರ್ವಹಿಸಬೇಕು ಎಂದು ಎಲ್ಲ ತಹಶೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನಿರ್ದೇಶನ ನೀಡಿದರು.

    ಜಿಪಂ ಸಿಇಒ ರಾಹುಲ್ ಶಿಂಧೆ, ಎಸ್ಪಿ ಡಾ. ಭೀಮಾಶಂಕರ ಗುಳೇದ, ಪಾಲಿಕೆ ಆಯುಕ್ತ ಲೋಕೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಡಾ. ಮಹೇಶ್ ಕೋಣಿ, ಬೆಳಗಾವಿ ತಹಶೀಲ್ದಾರ್ ಸಿದ್ದರಾಯ ಭೋಸಗಿ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ನವೀನ ಶಿಂತ್ರೆ, ಡಾ.ರಾಜೀವ ಕೂಲೇರ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts