More

    2002 ಗುಜರಾತ್​ ಗಲಭೆ ಪ್ರಕರಣ; ತೀಸ್ತಾ ಸೆಟಲ್ವಾಡ್​ಗೆ ಸುಪ್ರೀಂ ಕೋರ್ಟ್​ ಜಾಮೀನು

    ನವದೆಹಲಿ: 2002ರ ಗುಜರಾತ್​ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್​ಗೆ ಸುಪ್ರೀಂ ಕೋರ್ಟ್​ ರಿಲೀಫ್​ ನೀಡಿದೆ.

    ತೀಸ್ತಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್​. ಗವಾಯಿ, ಎ. ಎಸ್​. ಬೋಪಣ್ಣ ಹಾಗು ದೀಪಂಕರ್​ ದತ್ತಾ ಅವರಿದ್ದ ತ್ರಿಸದಸ್ಯ ಪೀಠವು ಗುಜರಾತ್​ ಹೈಕೋರ್ಟ್​ ಆದೇಶವನ್ನು ರದ್ದುಪಡಿಸಿ ಜಾಮೀನು ಮಂಜೂರು ಮಾಡಿದ್ದಾರೆ.

    ರದ್ದು ಮಾಡಲಾಗುವುದು

    ಜಾಮೀನಿನ ಅವಧಿಯಲ್ಲಿ ತೀಸ್ತಾ ಅವರ ಪಾಸ್​ಪೋರ್ಟ್​ಅನ್ನು ವಿಚಾರಣಾ ನ್ಯಾಯಾಲಯದಲ್ಲಿ ಇರಿಸುವಂತೆ ಸೂಚನೆ ನೀಡಲಾಗಿದ್ದು, ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರದಂತೆ ದೂರು ಉಳಿಯುವಂತೆ ಸೂಚಿಸಿದೆ. ಒಂದು ವೇಳೆ ನ್ಯಾಯಾಲಯ ವಿಧಿಸಿದ ಷರತ್ತುಗಳು ಉಲ್ಲಂಘನೆಯಾಗಿದ್ದು ಕಂಡು ಬಂದಲ್ಲಿ ಜಾಮೀನು ರದ್ದು ಮಾಡಲಾಗುವುದು ಎಂದು ನ್ಯಾಯಾಲಯ ಎಚ್ಚರಿಸಿದೆ.

    ಇದನ್ನೂ ಓದಿ: ಒಬ್ಬಳಿಗಾಗಿ ಇಬ್ಬರ ಕಿತ್ತಾಟ; ಯುವಕನನ್ನು ಥಳಿಸಿ ಮೂತ್ರ ವಿಸರ್ಜಿಸಿದರು

    2002ರ ಗೋಧ್ರಾ ಗಲಭೆಗೆ ಸಂಬಂಧಿಸಿದಂತೆ ಗುಜರಾತ್​ ಹೈಕೋರ್ಟ್​ ತೀಸ್ತಾಗೆ ಜಾಮೀನು ನೀಡಿತ್ತು. ಜಾಮೀನು ಅವಧಿ ಮುಗಿದ ಬಳಿಕ ನ್ಯಾಯಾಲಯಕ್ಕೆ ಜುಲೈ 1ರಂದು ಶರಣಾಗುವಂತೆ ಸೂಚನೆ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ತೀಸ್ತಾ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದರು.

    2002ರ ಗುಜರಾತ್​ ಗಲಭೆಗೆ ಸಂಬಂಧಿಸಿದಂತೆ ಸುಳ್ಳು ಸಾಕ್ಷಿಗಳನ್ನು ಸೃಷ್ಟಿ ಮಾಡಿದ ಆರೋಪದ ಮೇಲೆ ತೀಸ್ತಾರನ್ನು ಕಳೆದ ವರ್ಷ ಬಂಧಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts