ದರ್ಶನ್​ ನೋಡಲು ಮೊದಲ ಬಾರಿ ಜೈಲಿಗೆ ಬಂದ ಅಭಿಷೇಕ್​; ನಟನಿಗೆ ಸಾಥ್​ ನೀಡಿದ ಧನ್ವೀರ್, ಚಿಕ್ಕಣ್ಣ

Abhi Chikanna

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಕೇಸ್​ನಲ್ಲಿ ನಟ ದರ್ಶನ್​, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 17 ಮಂದಿ ಪರಪ್ಪನ ಅಗ್ರಹಾರ ಸೇರಿದ್ದು, ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ. ನಿಜಜೀವನದಲ್ಲಿ ಮಾದರಿಯಾಗಬೇಕಿದ್ದ ಸ್ಟಾರ್​ನಟನೊಬ್ಬನ ಈ ಕೃತ್ಯ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ-ನಟಿಯರು ದರ್ಶನ್​ಗೆ ಬೆಂಬಲ ಸೂಚಿಸುತ್ತಿದ್ದು, ದಾಸನನ್ನು ಭೇಟಿ ಮಾಡಲು ಜೈಲಿಗೆ ಬರುತ್ತಿದ್ದಾರೆ. ಇದೀಗ ನಟ ದರ್ಶನ್​ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಧನ್ವೀರ್, ಚಿಕ್ಕಣ್ಣ ಹಾಗೂ ಅಬಿಷೇಕ್​ ಅಂಬರೀಶ್​ ದಾಸನನ್ನು ಭೇಟಿಯಾಗಲು ಜೈಲಿಗೆ ಭೇಟಿ ನೀಡಿದ್ದಾರೆ.

ಚಿತ್ರರಂಗದ ಒಳಿತಿಗಾಗಿ ಕಲಾವಿದರ ಸಂಘದ ಕಚೇರಿಯಲ್ಲಿ ವಿಶೇಷ ಪೂಜೆ, ಹೋಮವನ್ನು ನೆರವೇರಿಸಲಾಗಿದ್ದು, ಸ್ಯಾಂಡಲ್​ವುಡ್​ನ ಹಲವು ನಟ-ನಟಿಯರು ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಈ ಮೂವರು ನಟರು ಆ ಬಳಿಕ ದರ್ಶನ್​ರನ್ನು ಪರಪ್ಪನ ಅಗ್ರಹಾರದಲ್ಲಿ ಭೇಟಿ ಮಾಡಿದ್ದಾರೆ.

ದರ್ಶನ್ ಜೈಲು ಪಾಲಾದ ಬಳಿಕ ಇದೀಗ ಬಾರಿಗೆ ನಟ ಅಭಿಷೇಕ್ ಜೈಲಿಗೆ ಭೇಟಿ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ 2 ಬಾರಿಯಷ್ಟೇ ಭೇಟಿಯಾಗಲು ಅವಕಾಶವಿರುತ್ತದೆ. ಆಗಸ್ಟ್​ 12ರಂದು ದರ್ಶನ್ ಕುಟುಂಬ ಜೈಲಿಗೆ ಭೇಟಿ ನೀಡಿ ಮಾತುಕತೆ ನಡೆಸಿತ್ತು. ಇದೀಗ ನಟರಾದ ಧನ್ವೀರ್, ಚಿಕ್ಕಣ್ಣ ಹಾಗೂ ಅಭಿಷೇಕ್​ ಅಂಬರೀಷ್​ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

Share This Article

ಕೆಂಪು ಬಾಳೆಹಣ್ಣಿನ ಸೇವನೆಯಿಂದಾಗುವ ಅದ್ಭುತ ಪ್ರಯೋಜಗಳಿವು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಕೆಂಪು ಬಾಳೆಹಣ್ಣು ಒಂದು ವಿಶಿಷ್ಟ ಮತ್ತು ಪೌಷ್ಟಿಕ ಹಣ್ಣು. ಇದು ಸಾಮಾನ್ಯ ಹಳದಿ ಬಾಳೆಹಣ್ಣಿಗಿಂತ ಹೆಚ್ಚು…

ಊಟ & ನಿದ್ರೆಯ ನಡುವಿನ ಅಂತರ ಎಷ್ಟಿರಬೇಕು?; ಇಲ್ಲಿದೆ ICMR ನೀಡಿರುವ ಸೂಚನೆ | Health Tips

ನಮ್ಮ ದಿನಚರಿಯ ಪ್ರಮುಖ ಭಾಗವೆಂದರೆ ಆಹಾರ ಸೇವಿಸುವುದು ಮತ್ತು ಸಾಕಷ್ಟು ನಿದ್ರೆ ಮಾಡುವುದು. ಆದರೆ ಜನರು…

ಬೇಸಿಗೆಯಲ್ಲಿ ಹಾಲಿನ ಚಹಾ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರಕ! ಈ ಚಹಾ ಟ್ರೈ ಮಾಡಿ.. Summer Morning Drinks

Summer Morning Drinks: ಬೇಸಿಗೆಯಾಗಿರಲಿ ಅಥವಾ ಚಳಿಗಾಲವಾಗಿರಲಿ, ಕೆಲವರು ಬೆಳಿಗ್ಗೆ ಎದ್ದ ತಕ್ಷಣ ಚಹಾ ಕುಡಿಯಲು ಇಷ್ಟಪಡುತ್ತಾರೆ. …