ಬೆಂಗಳೂರು: ನಗರದಲ್ಲಿ ಆ್ಯಂಬುಲೆನ್ಸ್ ಚಾಲಕರು ಆಸ್ಪತ್ರೆಗೆ ಕರೆದೊಯ್ಯಲು, ಶವಗಳನ್ನು ಅಂತ್ಯ ಸಂಸ್ಕಾರಕ್ಕೆ ತೆಗೆದುಕೊಂಡು ಹೋಗಲು ಹಣ ಪೀಕುತ್ತಿರುವ ವಿಚಾರ ನಿಮಗೆಲ್ಲರಿಗೂ ಗೊತ್ತಿದೆ. ಆದರೆ ಇದೀಗ ಆ್ಯಂಬುಲೆನ್ಸ್ ಚಾಲಕನಾಗಿ ನಿಸ್ವಾರ್ಥ ಸೇವೆಗೆ ಮುಂದಾಗಿದ್ದಾರೆ ಕನ್ನಡದ ಈ ನಟ.
ಯುವರತ್ನ, ಒಡೆಯಾ ಸಿನಿಮಾಗಳಲ್ಲಿ ನಟಿಸಿರುವ ನಟ ಅರ್ಜುನ್ ಗೌಡ ಸೋಂಕಿತರ ಸಹಾಯಕ್ಕೆ ಮುಂದಾಗಿದ್ದಾರೆ. ಕಳೆದ ಮೂರು ದಿನಗಳಿಂದ ಸ್ಮೈಲ್ ಪ್ರಾಜೆಕ್ಟ್ಸ್ ಸಂಸ್ಥೆಯೊಂದಿಗೆ ಕೈ ಜೋಡಿಸಿಕೊಂಡು ಆ್ಯಂಬುಲೆನ್ಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ.
ಈವರೆಗೆ ಅವರು 15 ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. 20 ಶವಗಳನ್ನು ಅಂತ್ಯ ಸಂಸ್ಕಾರ ಮಾಡಲು ರುಧ್ರಭೂಮಿಗೆ ತೆಗೆದುಕೊಂಡು ಹೋಗಿದ್ದಾರೆ. ಹಲವು ರೋಗಿಗಳ ಮನೆಗೆ ಆಕ್ಸಿಜನ್ ಪೂರೈಕೆ ಮಾಡಿದ್ದಾರೆ. ಯಾರಿಂದಲೂ ಒಂದೇ ರೂಪಾಯಿಯನ್ನೂ ಪಡೆಯದೇ ಸೇವೆ ಸಲ್ಲಿಸುತ್ತಿದ್ದಾರೆ. ಆ್ಯಂಬುಲೆನ್ಸ್ನಲ್ಲಿ ಬಾಯಿ ಬಂದಂತೆ ಹಣ ಕೇಳುತ್ತಿರುವ ವಿಚಾರ ತಿಳಿದ ನಂತರ ಈ ನಿರ್ಧಾರ ತೆಗೆದುಕೊಂಡಿದ್ದಾಗಿ ಅವರು ತಿಳಿಸಿದ್ದಾರೆ.
ಕಣ್ಣೆದುರೇ ಸೋಂಕಿತರು ಸಾವನ್ನಪ್ಪುತ್ತಿರುವುದನ್ನು ಕಂಡು ಕೈ ಮುಗಿದು ಕಣ್ಣೀರಿಟ್ಟ ವೈದ್ಯಕೀಯ ಅಧಿಕಾರಿ!