More

    ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ನಟ ದರ್ಶನ್​ ಅಭಿಮಾನಿಗಳು ಹಲ್ಲೆ: ಆರ್​.ಆರ್​.ನಗರದ ಠಾಣೆಯಲ್ಲಿ ದೂರು ದಾಖಲು

    ಬೆಂಗಳೂರು: ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ನಟ ದರ್ಶನ್​ ಅಭಿಮಾನಿಗಳು ಹಲ್ಲೆ ನಡೆಸಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ನಟ ದರ್ಶನ ಹುಟ್ಟುಹಬ್ಬದ ದಿನ ಪೊಲೀಸರ ಪೇದೆ ಮೇಲೆ‌ ಹಲ್ಲೆ ನಡೆಸಲಾಗಿದೆ.

    ದೇವರಾಜ್ ಎಂಬ ಪೊಲೀಸ್‌‌ ಪೇದೆಗೆ ದುಷ್ಕರ್ಮಿಗಳು ಗುದ್ದಿದ್ದಾರೆ. ದೇವರಾಜ್ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪೊಲೀಸ್​ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

    ಆರ್.ಆರ್.ನಗರದ ಐಡಿಯಲ್ ಹೋಮ್ ಲೇಔಟ್ ಬಳಿ ಘಟನೆ ನಡೆದಿದೆ. ನಟ ದರ್ಶನ್​ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಭದ್ರತೆಗೆ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು.

    ಈ ವೇಳೆ ನೂಕುನುಗ್ಗಲು ಉಂಟಾಗಿ ನಿಯಂತ್ರಿಸುವಾಗ ಪೇದೆ ದೇವರಾಜ್​ಗೆ ಅಭಿಮಾನಗಳ ಗುಂಪಿನಲ್ಲಿದ್ದ ದುಷ್ಕರ್ಮಿಗಳು ಪಂಚ್ ಮಾಡಿದ್ದಾರೆ.

    ದರ್ಶನ‌ ಅಭಿಮಾನಿಗಳು ಹಾಗೂ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಾಗಿದೆ. ರಾಜರಾಜೇಶ್ವರಿನಗರದ ಪೊಲೀಸ್ ಠಾಣೆಯಲ್ಲಿ ಪೇದೆ ದೇವರಾಜ್ ದೂರು ದಾಖಲಿಸಿದ್ದಾರೆ. ಗಾಯಾಳು ದೇವರಾಜ್​ ಅವರನ್ನು ಸಹೋದ್ಯೋಗಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts