More

    ಅವಕಾಶ ಕೊಡದೇ ಇದ್ದರೂ ಬೇಸರ ಇಲ್ಲ… ಆದರೆ ಹೆಸರು ಬದಲಿಸುವುದಿಲ್ಲ: ನಟ ದರ್ಶನ್

    ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​, ಬಾಕ್ಸ್​​ಆಫೀಸ್​ ಸುಲ್ತಾನ, ಅಭಿಮಾನಿಗಳ ಒಡೆಯ ಎಂದೇ ಖ್ಯಾತಿ ಪಡೆದಿರುವ ನಟ ದರ್ಶನ್​ ತೂಗುದೀಪ ಅವರಿಗೆ ದೊಡ್ಡ ಫ್ಯಾನ್​ ಬೇಸ್​ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಅವರ ಹೆಸರಿನ ಅನೇಕ ಫ್ಯಾನ್ಪೇಜ್​ಗಳಿದ್ದು, ಆಗಿಂದಾಗೆ ಅವರ ಫೋಟೋ ಹಾಗೂ ವಿಡಿಯೋಗಳು ವೈರಲ್​ ಆಗುತ್ತಿರುತ್ತವೆ. ಅದಕ್ಕೆ ಪೂರಕವೆಂಬಂತೆ ಈಗ ದರ್ಶನ್​ ಅವರ ಸಂದರ್ಶನದ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗಿದೆ.

    ಸ್ಟಾರ್​ನಟನ ಪುತ್ರನಾಗಿದ್ದರು ದರ್ಶನ್​ ಅವರು ಒಂದು ಕಾಲದಲ್ಲಿ ಲೈಟ್​ಬಾಯ್​ ಆಗಿ ಕೆಲಸ ಮಾಡಿದ್ದರು. ದಿನ ಕಳೆದಂತೆ ಚಿತ್ರ ಹಾಗೂ ಧಾರಾವಾಹಿಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸುವ ಮೂಲಕ ಬೆಳ್ಳಿ ತೆರೆ ಪ್ರವೇಶಿಸಿದ ದರ್ಶನ್​ ಅವರು ಹೀರೋ ಆಗಿ ನಟಿಸಿದ ಮೊದಲ ಸಿನಿಮಾದಲ್ಲೇ ಗೆಲುವು ದಕ್ಕಿತ್ತು. ಇದಾದ ಬಳಿಕ ಅವರನ್ನು ಆಫರ್​ಗಳು ಹುಡುಕಿಕೊಂಡು ಬರಲು ಶುರು ಮಾಡಿದವು. ಈ ಅವಧಿಯಲ್ಲಿ ಅವರಿಗೆ ಬಂದ ಸಿನಿಮಾ ಆಫರ್ ಬಗ್ಗೆ ದರ್ಶನ್ ಮಾತನಾಡಿದ್ದಾರೆ.

    ವೈರಲ್​ ಆಗಿರುವ ವಿಡಿಯೋದಲ್ಲಿ ಯಾವುದೋ ಸಿನಿಮಾಗಾಗಿ ಓರ್ವ ದೊಡ್ಡ ಡೈರೆಕ್ಟರ್​ನ ಭೇಟಿ ಮಾಡೋಕೆ ಹೋಗಿದ್ದೆ. ಆಗ ವಿಲನ್ ಪಾತ್ರ ಮಾಡುತ್ತಿದ್ದೆ. ಮಾತುಕತೆ ವೇಳೆ ನಿರ್ದೇಶಕರು ಸಿನಿಮಾ ಮಾಡೋಕೆ ಒಪ್ಪಿದ್ದರು. ಆದರೆ, ಹೆಸರು ಚೆನ್ನಾಗಿಲ್ಲ. ಹೆಸರು ಚೇಂಜ್ ಮಾಡೋಣ ಎಂದರು. ದೊಡ್ಡ ಡೈರೆಕ್ಟರ್ ಆದರೂ ನಾನು ಮಾತನಾಡಲೇಬೇಕು ಎಂದುಕೊಂಡೆ.

    ಇದನ್ನೂ ಓದಿ: ಸಾಧು ಒಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ ಕಿಡಿಗೇಡಿಗಳು; ವಿಡಿಯೋ ವೈರಲ್

    ದಯವಿಟ್ಟು ಬೇಸರ ಮಾಡಿಕೊಳ್ಳಬೇಡಿ. ಅವಕಾಶ ಕೊಡದೇ ಇದ್ದರೂ ಬೇಸರ ಇಲ್ಲ. ಕೊಟ್ರೆ ಬಂದು ಮಾಡ್ತೀನಿ. ಇದು ಅಪ್ಪ ಅಮ್ಮ ಇಟ್ಟ ಹೆಸರು. ಅದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ. ನೀವು ಕೊಟ್ಟ ಕ್ಯಾರೆಕ್ಟರ್​ಗಾಗಿ ಹೆಸರು ಬದಲಿಸಿಕೊಳ್ಳುವುದಿಲ್ಲ. ಧನ್ಯವಾದ ಹೇಳಿ ಬಂದೆ. ಆ ಬಳಿಕ ಆ ಸಿನಿಮಾನ ಬಿಟ್ಟೆ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

    ಕಳೆದ ವರ್ಷಾಂತ್ಯದಲ್ಲಿ ತೆರೆಕಂಡ ದರ್ಶನ್​ ಅಭಿನಯದ ಕಾಟೇರ ಚಿತ್ರವು ಬಾಕ್ಸ್​ಆಫೀಸ್​ನಲ್ಲಿ 200 ಕೋಟಿ ರೂಪಾಯಿ ಕಮಾಯಿ ಮಾಡುವಲ್ಲಿ ಯಶಸ್ವಿಯಾಯಿತು. ಸದ್ಯ ಡೆವಿಲ್​ ಚಿತ್ರೀಕರಣದಲ್ಲಿ ಬ್ಯುಸಿ ಇರುವ ನಟ ದರ್ಶನ್​ ಆ ಬಳಿಕ ಜೋಗಿ ಪ್ರೇಮ್​ ನಿರ್ದೇಶನದ ಚಿತ್ರದಲ್ಲಿ ಬ್ಯುಸಿಯಾಗಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts