More

    ನಟ ದಿಗಂತ್ ಹೆಲ್ತ್ ಬುಲೆಟಿನ್ ಬಿಡುಗಡೆ; ಈಗಿನ ಸ್ಥಿತಿಯ ಬಗ್ಗೆ ವೈದ್ಯರು ಹೇಳಿದ್ದೇನು?

    ಬೆಂಗಳೂರು: ಗೋವಾದಲ್ಲಿ ಸೊಮರ್‌ಸಾಲ್ಟ್ ಜಂಪ್ ಮಾಡುವಾಗ ಸ್ಯಾಂಡಲ್​ವುಡ್​​ ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದ್ದು, ಗೋವಾದಿಂದ ಏರ್​ಲಿಫ್ಟ್​ ಮೂಲಕ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆ ವೈದ್ಯರು ದಿಗಂತ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.

    ನಟ ದಿಗಂತ್ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಬೆಂಗಳೂರಿನಲ್ಲಿರುವ ಮಣಿಪಾಲ್ ಆಸ್ಪತ್ರೆ ವೈದ್ಯರು, ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. 

    ಮಣಿಪಾಲ್ ಆಸ್ಪತ್ರೆಯ ವೈದ್ಯರು ಹೇಳುವುದೇನು?: ಗೋವಾದಿಂದ ಏರ್ ಲಿಫ್ಟ್‌ನಲ್ಲಿ ಬಂದ ದಿಗಂತ್‌ನನ್ನು ಆಂಬ್ಯುಲೆನ್ಸ್‌ನಲ್ಲಿ ಕರೆತಂದು ಬೆಂಗಳೂರಿನಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಮಣಿಪಾಲ್ ಆಸ್ಪತ್ರೆಯ ವೈದ್ಯರು ಈಗಾಗಲೇ ದಿಗಂತ್‌ರನ್ನು ಪರೀಕ್ಷಿಸಿದ್ದಾರೆ. ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿರುವುದರಿಂದ ಶಸ್ತ್ರ ಚಿಕಿತ್ಸೆಯನ್ನು ಮಾಡುವುದು ಅನಿವಾರ್ಯವಾಗಬಹುದು ಎಂದು ತಿಳಿಸಿದ್ದಾರೆ ಎನ್ನಲಾಗುತ್ತಿದೆ. 

    ದಿಗಂತ್​​ಗೆ ಚಿಕಿತ್ಸೆ ನೀಡುತ್ತಿರುವ ಮಣಿಪಾಲ್ ಆಸ್ಪತ್ರೆ ವೈದ್ಯ ವಿದ್ಯಾಧರ್ ಈ ಬಗ್ಗೆ ಮಾಹಿತಿ ನೀಡಿದ್ದು, ಯಾವುದೇ ರೀತಿಯ ಗಾಬರಿ ಪಡುವ ಅವಶ್ಯಕತೆ ಇಲ್ಲ. ಚಿಕ್ಕ ಸರ್ಜರಿ ಮಾಡುತ್ತಿದ್ದೇವೆ ಎಂದಿದ್ದಾರೆ.  

    ಹೆಲ್ತ್ ಬುಲೆಟಿನ್ ಬಿಡುಗಡೆ: ವೈದ್ಯ ತಂಡದಿಂದ‌ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಪೋರ್ಟ್ಸ್ ಇಂಜುರಿಯಿಂದ ನೋವು ಅನುಭವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಬೇಕಾದ ಎಲ್ಲಾ ರೀತಿಯ ಚಿಕಿತ್ಸೆ ನೀಡುತ್ತಿದ್ದೇವೆ. ಚಿಕಿತ್ಸೆಗೆ ಸ್ಪಂದಿಸಿ ಬೇಗ ಚೇತರಿಕೆ ಕಂಡು ಕೊಳ್ಳುತ್ತಿದ್ದಾರೆ. ಚಿಕಿತ್ಸೆಯನ್ನ ಮುಂದುವರೆಸಿದ್ದೇವೆ ಎಂದು ತಿಳಿಸಿದ್ದಾರೆ.

    ನಟ ದಿಗಂತ್ ಹೆಲ್ತ್ ಬುಲೆಟಿನ್ ಬಿಡುಗಡೆ; ಈಗಿನ ಸ್ಥಿತಿಯ ಬಗ್ಗೆ ವೈದ್ಯರು ಹೇಳಿದ್ದೇನು?

    ಹಿಂದೊಮ್ಮೆ ಕಣ್ಣಿಗೆ ಗಾಯಮಾಡಿಕೊಂಡಿದ್ದ ದಿಗಂತ್: ‘ವೆಡ್ಡಿಂಗ್ ಪುಲಾವ್’ ಎಂಬ ಹಿಂದಿ ಚಿತ್ರದ ಬಳಿಕ ದಿಗಂತ್ ಕೈಗೆತ್ತಿಕೊಂಡ ಇನ್ನೊಂದು ಸಿನಿಮಾ ‘ಟಿಕೆಟ್ ಟು ಬಾಲಿವುಡ್’. ಈ ಚಿತ್ರದ ಶೂಟಿಂಗ್ ವೇಳೆ ನಾಯಕಿ ಎಸೆದ ಚೂರಿ ದಿಗಂತ್ ಕಣ್ಣಿಗೆ ಬಿದ್ದ ಪರಿಣಾಮ ದೃಷ್ಟಿ ಕಳೆದುಕೊಂಡರು ಎಂಬ ಸುದ್ದಿ ಹೊರಬಿದ್ದಿತ್ತು. ಮೂರ್ನಾಲ್ಕು ಬಾರಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಪಟ್ಟರೂ, ಕಣ್ಣು ಮೊದಲಿನಿಂತೆ ಸ್ಪಷ್ಟವಾಗಿ ಕಾಣಿಸಲ್ಲ ಎಂದು ಸುದ್ದಿಗಳು ವರದಿಯಾದವು. ಆದ್ರೆ, ಇದು ಸತ್ಯವಾಗಿರಲಿಲ್ಲ.

    ದೃಷ್ಟಿ ಕಳೆದುಕೊಂಡರು ಎಂಬ ವದಂತಿಗಳ ಕುರಿತು ಸ್ಪಷ್ಟನೆ ನೀಡಿದ್ದ ದಿಗಂತ್ ಚಿತ್ರೀಕರಣ ವೇಳೆ ಕಣ್ಣಿಗೆ ಪೆಟ್ಟು ಬಿದ್ದಿದ್ದು ನಿಜ, ಆದ್ರೆ ನಾಯಕಿ ಎಸೆದಿದ್ದು ಚೂರಿ ಅಲ್ಲ, ಹೈ ಹೀಲ್ಡ್ ಚಪ್ಪಲಿ. ಅದು ಅಕಸ್ಮಾತ್ ಆಗಿ ಎಸೆದಿದ್ದು. ಕಣ್ಣು ಗುಡ್ಡೆಗೆ ಗಾಯವಾಗಿದೆ, ದೃಷ್ಟಿ ಕಳೆದುಕೊಂಡಿಲ್ಲ, ಚಿಕಿತ್ಸೆ ಪಡೆಯುತ್ತಿದ್ದೇನೆ. ಸ್ವಲ್ಪ ದಿನ ವಿಶ್ರಾಂತಿ ಬೇಕು. ಪೂರ್ಣವಾಗಿ ದೃಷ್ಟಿ ಕಾಣಿಸುತ್ತೆ. ಭವಿಷ್ಯದಲ್ಲಿ ಏನೂ ತೊಂದರೆ ಇರುವುದಿಲ್ಲ ಎಂದು ದಿಗಂತ್ ಹೇಳಿದ್ದರು.

    ಏನಿದು ಸೊಮರ್‌ಸಾಲ್ಟ್?: ಸೊಮರ್‌ಸಾಲ್ಟ್ (ತಲೆಕೆಳಗಾಗಿ ಹಾರುವ ಸಾಹಸ) ಎನ್ನುವುದು ಮನುಷ್ಯನ ದೇಹವನ್ನು ಒಂದು ಅಥವಾ ಅದಕ್ಕಿಂತ ಹೆಚ್ಚು ಬಾರಿ ತಲೆ ಕೆಳಗಾಗಿ ಪಲ್ಟಿ ಹೊಡೆಯುವುದೇ ಸೊಮರ್‌ಸಾಲ್ಟ್ ಅಥವಾ ಬ್ಯಾಕ್ ಫ್ಲಿಪ್ ಜಂಪ್ ಎನ್ನುತ್ತಾರೆ. ಸಾಮಾನ್ಯವಾಗಿ ಇದನ್ನು ಸಾಹಸಿಗಳು, ದೈಹಿಕ ಕಸರತ್ತು ಮಾಡುವವರು, ಕ್ರೀಡಾಪಟುಗಳು ಮಾಡುತ್ತಾರೆ. ಗೋಲ್ ಹೊಡೆದ ಬಳಿಕ ಕೆಲ ಫುಟ್ಬಾಲ್ ಆಟಗಾರರು ಈ ರೀತಿ ಜಂಪ್ ಮಾಡುವ ಸಾಹಸಕ್ಕೆ ಮುಂದಾಗುತ್ತಾರೆ. ತರಬೇತಿ ಪಡೆದು ಈ ಸಾಹಸ ಮಾಡಬೇಕು ಇಲ್ಲದಿದ್ದರೆ ಪ್ರಾಣಕ್ಕೆ ಅಪಾಯ. ಇದೇ ರೀತಿ ಈ ಸಾಹಸ ಜಂಪ್ ಮಾಡಲು ಹೋಗಿ ಹಲವಾರು ಕ್ರೀಡಾಪಟುಗಳು ಪ್ರಾಣ ಕಳೆದುಕೊಂಡಿದ್ದಾರೆ.

     

    ಮೂರು ಗಂಟೆ ಸರ್ಜರಿ; ನಟ ದಿಗಂತ್​ ಸ್ಥಿತಿ ಬಗ್ಗೆ ವೈದ್ಯರು ಹೇಳಿದ್ದಿಷ್ಟು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts