ಬೆಂಗಳೂರು: ಸ್ಯಾಂಡಲ್ವುಡ್ ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದ್ದು, ಗೋವಾದಿಂದ ಏರ್ಲಿಫ್ಟ್ ಮೂಲಕ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ದಿಗಂತ್ಗೆ ಚಿಕಿತ್ಸೆ ನೀಡುತ್ತಿರುವ ಮಣಿಪಾಲ್ ಆಸ್ಪತ್ರೆ ವೈದ್ಯ ವಿದ್ಯಾಧರ್ ಈ ಬಗ್ಗೆ ಮಾಹಿತಿ ನೀಡಿದ್ದು, ಯಾವುದೇ ರೀತಿಯ ಗಾಬರಿ ಪಡುವ ಅವಶ್ಯಕತೆ ಇಲ್ಲ. ಚಿಕ್ಕ ಸರ್ಜರಿ ಮಾಡುತ್ತಿದ್ದೇವೆ ಎಂದಿದ್ದಾರೆ. ಅಲ್ಲದೇ ಸ್ಪೈನಲ್ ಕಾರ್ಡ್ಗೆ ಏಟು ಬಿದ್ದಿದೆ ಎಂಬ ವದಂತಿ ಸುಳ್ಳು ಎಂದು ದಿಗಂತ್ ತಂದೆ ಕೃಷ್ಣಮೂರ್ತಿ ತಿಳಿಸಿದರು.
ಆಸ್ಪತ್ರೆಗೆ ನಟನನ್ನು ದಾಖಲು ಮಾಡುತ್ತಿದ್ದಂತೆ ಆಪ್ತರು ಹಾಗೂ ಅಭಿಮಾನಿಗಳು ಆಸ್ಪತ್ರೆಗೆ ಧಾವಿಸುತ್ತಿದ್ದಾರೆ. ಈ ಸಂಬಂಧ ದಿಗಂತ್ ಪತ್ನಿ ಐಂದ್ರಿತಾ ಅವರ ತಂದೆ ಮಾಹಿತಿ ನೀಡಿದ್ದು, ದಿಗಂತ್ಗೆ ಎಂಆರ್ಐ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಿಸಲಾಗಿದೆ. ಇದರಲ್ಲಿ ಕುತ್ತಿಗೆಗೆ ಬಲವಾದ ಪೆಟ್ಟುಬಿದ್ದಿದೆ ಎಂಬ ಬಗ್ಗೆ ತಿಳಿದು ಬಂದಿದೆ ಎಂದಿದ್ದಾರೆ.
ಕುಟುಂಬದ ಜತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ದಿಗಂತ್ ಸೊಮರ್ಸಾಲ್ಟ್ ಹೊಡೆಯುವ ವೇಳೆ ಈ ಘಟನೆ ನಡೆದಿದೆ. ದೂದ್ಪೇಡಾ ದಿಗಂತ್ ಎಂದೇ ಹೆಸರುವಾಸಿಯಾಗಿರುವ ನಟ ದಿಗಂತ್ ತಮ್ಮ ನಟನೆಯಿಂದಲೇ ಹೆಸರುವಾಸಿಯಾದವರು.
ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು; ಗೋವಾದಿಂದ ಬೆಂಗಳೂರಿಗೆ ಏರ್ಲಿಫ್ಟ್