More

    ಮೂರು ಗಂಟೆ ಸರ್ಜರಿ; ನಟ ದಿಗಂತ್​ ಸ್ಥಿತಿ ಬಗ್ಗೆ ವೈದ್ಯರು ಹೇಳಿದ್ದಿಷ್ಟು…

    ಬೆಂಗಳೂರು: ಸ್ಯಾಂಡಲ್​ವುಡ್​​ ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದ್ದು, ಗೋವಾದಿಂದ ಏರ್​ಲಿಫ್ಟ್​ ಮೂಲಕ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

    ದಿಗಂತ್​​ಗೆ ಚಿಕಿತ್ಸೆ ನೀಡುತ್ತಿರುವ ಮಣಿಪಾಲ್ ಆಸ್ಪತ್ರೆ ವೈದ್ಯ ವಿದ್ಯಾಧರ್ ಈ ಬಗ್ಗೆ ಮಾಹಿತಿ ನೀಡಿದ್ದು, ಯಾವುದೇ ರೀತಿಯ ಗಾಬರಿ ಪಡುವ ಅವಶ್ಯಕತೆ ಇಲ್ಲ. ಚಿಕ್ಕ ಸರ್ಜರಿ ಮಾಡುತ್ತಿದ್ದೇವೆ ಎಂದಿದ್ದಾರೆ. ಅಲ್ಲದೇ ಸ್ಪೈನಲ್​ ಕಾರ್ಡ್​ಗೆ ಏಟು ಬಿದ್ದಿದೆ ಎಂಬ ವದಂತಿ ಸುಳ್ಳು ಎಂದು ದಿಗಂತ್ ತಂದೆ ಕೃಷ್ಣಮೂರ್ತಿ ತಿಳಿಸಿದರು.

    ಆಸ್ಪತ್ರೆಗೆ ನಟನನ್ನು ದಾಖಲು ಮಾಡುತ್ತಿದ್ದಂತೆ ಆಪ್ತರು ಹಾಗೂ ಅಭಿಮಾನಿಗಳು ಆಸ್ಪತ್ರೆಗೆ ಧಾವಿಸುತ್ತಿದ್ದಾರೆ. ಈ ಸಂಬಂಧ ದಿಗಂತ್ ಪತ್ನಿ ಐಂದ್ರಿತಾ ಅವರ ತಂದೆ ಮಾಹಿತಿ ನೀಡಿದ್ದು, ದಿಗಂತ್​ಗೆ ಎಂಆರ್​ಐ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಿಸಲಾಗಿದೆ. ಇದರಲ್ಲಿ ಕುತ್ತಿಗೆಗೆ ಬಲವಾದ ಪೆಟ್ಟುಬಿದ್ದಿದೆ ಎಂಬ ಬಗ್ಗೆ ತಿಳಿದು ಬಂದಿದೆ ಎಂದಿದ್ದಾರೆ.

    ಕುಟುಂಬದ ಜತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ದಿಗಂತ್ ಸೊಮರ್‌ಸಾಲ್ಟ್ ಹೊಡೆಯುವ ವೇಳೆ ಈ ಘಟನೆ ನಡೆದಿದೆ. ದೂದ್‌ಪೇಡಾ ದಿಗಂತ್ ಎಂದೇ ಹೆಸರುವಾಸಿಯಾಗಿರುವ ನಟ ದಿಗಂತ್ ತಮ್ಮ ನಟನೆಯಿಂದಲೇ ಹೆಸರುವಾಸಿಯಾದವರು.

    ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು; ಗೋವಾದಿಂದ ಬೆಂಗಳೂರಿಗೆ ಏರ್​ಲಿಫ್ಟ್

    ತಮ್ಮ ಮನೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ಧಾರಾವಾಹಿ ನಟಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts