ಬೆಂಗಳೂರು: ಸ್ಯಾಂಡಲ್ವುಡ್ನ ಚಿತ್ರನಟ ಹಾಗೂ ನಿರ್ಮಾಪಕ ಗೌರಿಶಂಕರ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಗುರುವಾರ ಸರಳವಾಗಿ ವಿವಾಹವಾಗಿದ್ದಾರೆ.
ಶಿವಮೊಗ್ಗ ಮೂಲದ ಅರುಣಾ ಅವರನ್ನು ವರಿಸಿರುವ ಅವರ ಈ ಮದುವೆಗೆ ಕೋವಿಡ್-19 ಹಿನ್ನೆಲೆಯಲ್ಲಿ ಇಪ್ಪತ್ತು ಜನರಿಗಷ್ಟೇ ಆಹ್ವಾನ ನೀಡಲಾಗಿತ್ತು. ಉಭಯ ಕುಟುಂಬಸ್ಥರು ಹಾಗೂ ಅತ್ಯಾಪ್ತರಷ್ಟೇ ಉಪಸ್ಥಿತರಿದ್ದ ಈ ಮದುವೆ ಸರಳವಾಗಿ ನೆರವೇರಿತು.
ಗೌರಿಶಂಕರ್ ‘ರಾಜಹಂಸ’ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದು, ನಿರ್ಮಾಪಕರಾಗಿಯೂ ಬಂಡವಾಳ ಹೂಡಿದ್ದರು. ಅರುಣಾ ಬೆಂಗಳೂರಿನಲ್ಲಿ ಫ್ಯಾಷನ್ ಡಿಸೈನರ್ ಆಗಿದ್ದಾರೆ.