More

    ಹುಲಿ ಉಗುರು ಪ್ರಕರಣ; ನಾನು ತಲೆ ತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದಿಲ್ಲ ಪಾಚ್ಕೊಳಿ ಎಂದ ನಟ ಜಗ್ಗೇಶ್

    ಬೆಂಗಳೂರು: ಹುಲಿ ಉಗುರಿನ ಲಾಕೆಟ್​ ಧರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್​ ಮೆನೆಗೆ ತೆರಳಿ ಹುಲಿ ಉಗುರಿನ ಪೆಂಡೆಂಟ್​ ಅನ್ನು ವಶಕ್ಕೆ ಪಡೆದಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿರುವ ನಟ ಜಗ್ಗೇಶ್​ ನಾನು ತಲೆ ತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದಿಲ್ಲ ಎಂದು ಬರೆದುಕೊಂಡಿದ್ದಾರೆ.

    ಇದನ್ನೂ ಓದಿ: ಪ್ರಧಾನಿ ಮೋದಿ ಸ್ವೀಕರಿಸಿದ ಸ್ಮರಣಿಕೆಗಳ ಹರಾಜು; ದುಬಾರಿ ಬೆಲೆಗೆ ಬಿಕರಿಯಾಯಿತು ಬನಾರಸ್​ ಘಾಟ್ ಪೇಂಟಿಂಗ್‌

    ಕಾನೂನು ದೊಡ್ಡದು ಅಧಿಕಾರಿಗಳು ಕೇಳಿದವಸ್ತು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ. ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು,ಸಮಾಜ ಘಾತಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ನೆನ್ನೆಯಿಂದ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲಾ ಮಾಡೋದಿಲ್ಲಾ ಪಾಚ್ಕೊಳಿ.

    ಒಂದು ವಿಷಯ ಅದ್ಭುತವಾಗಿ ಅರಿತೆ ಪ್ರೀತಿಸುವವರು 1000ಜನ ಇದ್ದರು ವಿಷಯವಿಲ್ಲದೆ ದ್ವೇಷ ಮಾಡುವ 100ಜನರು ಇದ್ದೆ ಇರುತ್ತಾರೆ. But remember one thing ಒಳ್ಳೆಗುಣನಡತೆ ಇದ್ದಾಗ ಕೊಲ್ಲೋಕೆ ಸಾವಿರಮಂದಿ ಬಂದರು ಕಾಯಲು ಒಬ್ಬ ಬರುತ್ತಾನೆ ಅವನೆ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆದುಮಾಡಿ ಅನ್ಯರಿಗೆ ಕೆಡುಕುಬಯಸಿ ಬಾಳಿದರೆ ನಾಶ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts