More

    ಅತ್ಯಾಚಾರ ಮಾಡುವ ಮುನ್ನ ನೂರು ಬಾರಿ ಯೋಚಿಸಬೇಕು, ಅಂತಹ ಶಿಕ್ಷೆ ನೀಡಿ: ನಟಿ ಪೂಜಾಗಾಂಧಿ

    ಕೊಪ್ಪಳ: ಮೈಸೂರು ಗ್ಯಾಂಗ್​ರೇಪ್ ಪ್ರಕರಣದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಹಲವು ನಟಿಯರು ಈ ಬಗ್ಗೆ ಮಾತನಾಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ನಟಿ ಪೂಜಾಗಾಂಧಿ ಕೂಡ ಧ್ವನಿ ಎತ್ತಿದ್ದು, ಆರೋಪಿಗಳಿಗೆ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.

    ಕೊಪ್ಪಳದಲ್ಲಿ ಮಾತನಾಡಿದ ಅವರು, ಮೈಸೂರು ಯುವತಿ ಗ್ಯಾಂಗ್ ರೇಪ್ ಪ್ರಕರಣ ತುಂಬಾ ಬೇಸರವಾಗುತ್ತದೆ. ಬೇರೆ ಬೇರೆ ರಾಜ್ಯದಲ್ಲಿ ಇಂಥ ಪ್ರಕರಣ ನಡೆಯುತ್ತಿದ್ದವು ಎಂದು ಕೇಳಿದ್ದೇವೆ. ಆದರೆ ಅಂತಹ ಘಟನೆ ಈಗ ಮೈಸೂರಿನಲ್ಲಿ ನಡೆದಿದೆ, ಆರೋಪಿಗಳಿಗೆ ಶಿಕ್ಷೆ ನೀಡಬೇಕು ಎಂದು ನಟಿ ಪೂಜಾಗಾಂಧಿ ಒತ್ತಾಯಿಸಿದ್ದಾರೆ.

    ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ನಡೆಸಿ ಆರೋಪಿಗಳಿಗೆ ಶಿಕ್ಷೆ ನೀಡಬೇಕು. ಇಂತಹ ಘಟನೆಗಳಿಂದ ಮಹಿಳೆಯರಿಗೆ ರಕ್ಷಣೆ ಎಲ್ಲಿದೆ ಎಂಬುದು ಗೊತ್ತಾಗಿದೆ. ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು. ಎಲ್ಲರ ಮನೆಯ ಹೆಣ್ಣು ಮಕ್ಕಳು ಒಂದೆ ಎಂದು ತಿಳಿಸಿದರು.

    ಕಾನೂನಿನ ಪ್ರಕಾರ ಏನು ಕ್ರಮ ಇದೆಯೋ ಆ ಕ್ರಮ ಜರುಗಿಸಬೇಕು. ಬೇರೆಯವರು ಅತ್ಯಾಚಾರ ಮಾಡುವುದಕ್ಕೆ ಮುಂಚೆ ನೂರು ಬಾರಿ ಯೋಚಿಸಬೇಕು ಅಂತಹ ಶಿಕ್ಷೆ ನೀಡಬೇಕು. ಸಣ್ಣ ಸಣ್ಣ ಮಕ್ಕಳ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಇಂತಹ ಮನಸ್ಥಿತಿಯವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದರು. ನಾನು ಕಾನೂನನ್ನು ಗೌರವಿಸುತ್ತೇನೆ. ಮಹಿಳೆಯರ ರಕ್ಷಣೆಗಾಗಿ ಇರುವ ಕಾನೂನುಗಳಿಂದ ಎಲ್ಲ ಮಹಿಳೆಯರು ನಾವು ಸೇಫ್ ಆಗಿದ್ದೇವೆ ಎಂಬ ಫೀಲ್ ಬರಬೇಕು ಎಂದು ನಟಿ ಪೂಜಾ ಗಾಂಧಿ ಹೇಳಿದರು.

    ಪೊಲೀಸ್​ ಇಲಾಖೆಯ ಕಣ್ಣು ಕೆಂಪಾಗಿಸಿದ ಬಚ್ಚನ್​ ಬಾಡಿಗಾರ್ಡ್​ ವಾರ್ಷಿಕ ಆದಾಯ: ದಿಢೀರ್​ ವರ್ಗಾವಣೆ..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts