ಬೆಂಗಳೂರು: ನಟ ಶಿವರಾಜ್ ಕುಮಾರ್ ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪರ ಭರ್ಜರಿ ಪ್ರಚಾರ ನಡಿಸಿದ್ದಾರೆ. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ್ ಸಾಮಾಜಿಕ ಜಾಲತಾಣದ ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದರು. ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ್ದಾರೆ.
ಅವರವರ ಭಾವ ಭಕುತಿಗೆ…
“ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವರ ಭಾವ ಭಕುತಿಗೆ…” ಎಂದು ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.
ಇದನ್ನೂ ಓದಿ: ಇನ್ಮುಂದೆ ಎಲ್ಕೆಜಿ ಪ್ರವೇಶಕ್ಕೆ 4 ವರ್ಷ ವಯೋಮಿತಿ ನಿಗದಿ; ಪಾಲಕರಿಂದ ವಿರೋಧ
ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ!
— Pratap Simha (@mepratap) May 4, 2023
ಅವರವ ಭಾವ ಭಕುತಿಗೆ… pic.twitter.com/AwsuZHzmHA
‘ಅಪ್ಪು’ ಅವರನ್ನು ಯಾಕೆ ಎಳೆಯುತ್ತೀರಿ?
ಇದೀಗ ಪ್ರತಾಪ್ ಸಿಂಹ ಮಾಡಿರುವ ಟ್ವೀಟ್ನ್ನು ಪ್ರಕಾಶ್ ರಾಜ್ ರಿ-ಟ್ವೀಟ್ ಮಾಡಿದ್ದಾರೆ. “ನಿಮ್ಮ ಹೊಲಸು ರಾಜಕಾರಣಕ್ಕೆ ನಮ್ಮೆಲ್ಲರ ‘ಅಪ್ಪು’ ಅವರನ್ನು ಯಾಕೆ ಎಳೆಯುತ್ತೀರಿ? ಇದು ತುಂಬಾ ದೊಡ್ಡ ತಪ್ಪು” ಎಂದು ಪ್ರತಾಪ್ ಸಿಂಹ ಅವರ ವಿರುದ್ಧ ಪ್ರಕಾಶ್ ರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಚುನಾವಣೆಯ ಹೊಸ್ತಿಲಲ್ಲೇ ಕೋಲಾರ ಬಿಜೆಪಿ ಅಭ್ಯರ್ಥಿ ವರ್ತೂರು ಪ್ರಕಾಶ್ಗೆ ಬಂಧನ ಭೀತಿ
ನಿಮ್ಮ ಹೊಲಸು ರಾಜಕಾರಣಕ್ಕೆ ..ನಮ್ಮೆಲ್ಲರ “ಅಪ್ಪು” ಅವರನ್ನ ಯಾಕ್ ಎಳೀತೀರ್ರಿ @mepratap ಅವರೆ .. ಛಿ ಛೀ .. ಇದು ತುಂಬಾ ದೊಡ್ಡ ತಪ್ಪು .. ಮಾಡ್ಬೇಡಿ 🙏🏿🙏🏿🙏🏿 #justasking https://t.co/72PuTBOHv1
— Prakash Raj (@prakashraaj) May 4, 2023
ರಾಘಣ್ಣ ಶ್ಲಾಘನೆ
ನಟ ಪುನೀತ್ ರಾಜ್ಕುಮಾರ್ ಹೆಸರಿನಲ್ಲಿ ಸಚಿವ ಸೋಮಣ್ಣ ಆಸ್ಪತ್ರೆ ಕಟ್ಟಿದ್ದರು. ಈ ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ್ದ ರಾಘವೇಂದ್ರ ರಾಜ್ಕುಮಾರ್, ಸೋಮಣ್ಣ ಅವರ ಕಾರ್ಯವನ್ನು ಮೆಚ್ಚಿ ಶ್ಲಾಘಿಸಿದ್ದರು. 2023ರ ಈ ಕಾಲದಲ್ಲಿ ಬಡವರಿಗಾಗಿ ಇಂತಹ ಉಚಿತ ಆಸ್ಪತ್ರೆ ಯಾರು ಕಟ್ಟುತ್ತಾರೆ? ಎಷ್ಟು ಪುಣ್ಯ ಮಾಡಿದ್ದೇವೆ ನಾವು ನೀವು, ಸೋಮಣ್ಣ ಅವರಿಗೆ ಸೆಲ್ಯೂಟ್ ಬಿಟ್ಟರೆ ಬೇರೆ ಏನೂ ಹೇಳಲು ಸಾಧ್ಯವಿಲ್ಲ ಎಂದು ರಾಘವೇಂದ್ರ ರಾಜ್ಕುಮಾರ್ ವೇದಿಕೆಯಲ್ಲಿ ಹೇಳಿದ್ದರು. ಈ ವಿಡಿಯೋ ತುಣುಕನ್ನು ಮುಂದಿಟ್ಟುಕೊಂಡು ಶಿವರಾಜ್ ಕುಮಾರ್ ಅವರಿಗೆ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದರು.