More

    ಆಸ್ಪತ್ರೆಯಿಂದ ಬಿಡುಗಡೆಯಾದ್ರು ಸೂಪರ್​ ಸ್ಟಾರ್ ರಜಿನಿಕಾಂತ್

    ಹೈದರಾಬಾದ್​: ರಕ್ತದೊತ್ತಡ ಸಮಸ್ಯೆಯ ಕಾರಣಕ್ಕೆ ನಿನ್ನೆ ಹೈದರಾಬಾದಿನ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್​ಸ್ಟಾರ್ ರಜಿನಿಕಾಂತ್​ ಅವರು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆರೋಗ್ಯ ಸ್ಥಿತಿ ಸುಧಾರಿಸಿದ ಕಾರಣ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

    ರಜಿನಿಕಾಂತ್​ ಅವರು ತಮ್ಮ ಅಭಿನಯದ ‘ಅಣ್ಣಾತ್ತೆ’ ಚಿತ್ರತಂಡದ ನಾಲ್ವರಲ್ಲಿ ಕರೊನಾ ಪಾಸಿಟಿವ್​ ಬಂದ ಹಿನ್ನೆಲೆಯಲ್ಲಿ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ರಜಿನಿಕಾಂತ್​ ಪ್ರತ್ಯೇಕವಾಗಿದ್ದರು. ರಕ್ತದೊತ್ತಡದಲ್ಲಿ ಏರಿಳಿತದ ಸಮಸ್ಯೆಯಿಂದ ನಿನ್ನೆ ಹೈದರಾಬಾದ್​ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರವಷ್ಟೇ ರಜಿನಿ ಅವರಿಗೆ ಕರೊನಾ ನೆಗಿಟಿವ್​ ವರದಿಯಾಗಿತ್ತು.

    ಇದನ್ನೂ ಓದಿನಾಪತ್ತೆಯಾಗಿದ್ದ ಎಸ್​ಪಿಒ ಜೆಇಎಂ ಉಗ್ರನಾಗಿ ಪತ್ತೆ ! 

    ರಜನಿಕಾಂತ್​ ಅವರು ‘ಅಣ್ಣಾತ್ತೆ’ ಚಿತ್ರವನ್ನು ಜನವರಿ 12ರೊಳಗೆ ಮುಗಿಸಬೇಕು ಎಂದು ಪ್ಲಾನ್​ ಹಾಕಿಕೊಂಡಿದ್ದರು. ಅದಕ್ಕಾಗಿ ಕಳೆದ ಕೆಲವು ದಿನಗಳಿಂದ, ಪ್ರತಿದಿನ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು. ಚಿತ್ರೀಕರಣ ಸಹ ಸಾಕಷ್ಟು ಮುಗಿದಿತ್ತು. ಎಲ್ಲಾ ಚೆನ್ನಾಗಿ ನಡೆಯುತ್ತಿರುವಾಗ, ಚಿತ್ರತಂಡದ ನಾಲ್ವರಿಗೆ ಕರೊನಾ ಪಾಸಿಟಿವ್​ ಬಂದಿರುವುದರಿಂದ ಚಿತ್ರೀಕರಣ ಅನಿವಾರ್ಯವಾಗಿ ಮುಂದಕ್ಕೆ ಹೋಗಿದೆ. (ಏಜೆನ್ಸೀಸ್)

    ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

    ಜೆಡಿಯುಗೆ ಹೊಸ ಸಾರಥಿ- ನಾಯಕತ್ವದಿಂದ ಹಿಂದೆ ಸರಿದ್ರು ನಿತೀಶ್ ಕುಮಾರ್ !

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts