More

    ನಟ ಶರತ್​ಬಾಬು ಕುರಿತು ಏನಿದು ವದಂತಿ?: ಟ್ವೀಟ್ ಮಾಡಿ ಡಿಲೀಟ್ ಮಾಡಿದ ಕಮಲಹಾಸನ್!

    ಬೆಂಗಳೂರು: ಕನ್ನಡದ ‘ಅಮೃತವರ್ಷಿಣಿ’ ಸಿನಿಮಾದಲ್ಲೂ ಅಭಿನಯಿಸಿ ಗಮನ ಸೆಳೆದಿದ್ದ ಬಹುಭಾಷಾ ನಟ ಶರತ್​ಬಾಬು ಅನಾರೋಗ್ಯ ಸಂಬಂಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ಗೊತ್ತಿರುವಂಥದ್ದೇ. ಆದರೆ ಈ ಮಧ್ಯೆ ಅವರು ಸಾವಿಗೀಡಾಗಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ.

    ಇದನ್ನೂ ಓದಿ: ಕಾಂಗ್ರೆಸ್ ಪ್ರಣಾಳಿಕೆ ವಿರೋಧಿಸಿ ದೇವಾಲಯಗಳಲ್ಲಿ ನಾಳೆ ‘ಹನುಮಾನ್ ಚಾಲೀಸಾ’ ಪಠಣ

    ನಟ ಕಮಲಹಾಸನ್ ಅವರು ಶರತ್​ಬಾಬುವನ್ನು ಸಹೋದರ, ಗೆಳೆಯ, ಹಿತೈಷಿ ಎಂದೆಲ್ಲ ಸಂಬೋಧಿಸಿ, ನೀವು ಸದಾ ನೆನಪಿನಲ್ಲಿರುತ್ತೀರಿ ಎಂದು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದರು. ಆದರೆ ಶರತ್ ಅವರು ಜೀವಂತವಿದ್ದಾರೆ ಎಂದು ಹಲವರು ಕಮೆಂಟ್ ಮಾಡಿದ್ದರಿಂದ, ಕಮಲಹಾಸನ್​ ಇಂದು ರಾತ್ರಿ 9.20ಕ್ಕೆ ಮಾಡಿದ್ದ ಟ್ವೀಟನ್ನು ಕೆಲವೇ ನಿಮಿಷಗಳಲ್ಲಿ ಡಿಲೀಟ್ ಮಾಡಿದ್ದಾರೆ.

    ಇದನ್ನೂ ಓದಿ: ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..

    ಅಲ್ಲದೆ ಶರತ್​ ಅವರು ಅನಾರೋಗ್ಯದಲ್ಲಿರುವುದು ನಿಜ. ಆದರೆ ಅವರು ಸಾವಿಗೀಡಾಗಿಲ್ಲ ಎಂದು ಅವರ ಆಪ್ತವರ್ಗದ ಹಲವರು ಟ್ವೀಟ್ ಮಾಡಿದ್ದಾರೆ. ಮಾತ್ರವಲ್ಲ, ಶರತ್​ಬಾಬು ಅವರ ಕುರಿತು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು. ಶರತ್​ಬಾಬು ಅವರು ಚೇತರಿಸಿಕೊಂಡಿದ್ದು, ವಾರ್ಡ್​ಗೆ ಸ್ಥಳಾಂತರಿಸಲಾಗಿದೆ ಎಂದು ಅವರ ಸಹೋದರಿ ಸ್ಪಷ್ಟನೆ ನೀಡಿದ್ದಾಗಿ ಆಪ್ತಮೂಲಗಳು ತಿಳಿಸಿವೆ.

    ನಟ ಶರತ್​ಬಾಬು ಕುರಿತು ಏನಿದು ವದಂತಿ?: ಟ್ವೀಟ್ ಮಾಡಿ ಡಿಲೀಟ್ ಮಾಡಿದ ಕಮಲಹಾಸನ್!
    ನಟ ಶರತ್​ಬಾಬು ಕುರಿತು ನಟ ಕಮಲಹಾಸನ್ ಮಾಡಿದ್ದ ಟ್ವೀಟ್, ಬಳಿಕ ಕೆಲವೇ ನಿಮಿಷಗಳಲ್ಲಿ ಡಿಲೀಟ್ ಮಾಡಿದ್ದರು.

    ಸ್ಲೀಪ್ ಡೈವೋರ್ಸ್: ಇದು ಗಂಡ-ಹೆಂಡಿರ ಹೊಸ ಟ್ರೆಂಡ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts