ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಪರ ನಿಗದಿಯಾಗಿದ್ದ ನಟ ಕಿಚ್ಚ ಸುದೀಪ್ ಅವರ ರೋಡ್ ಶೋ ರದ್ದಾಗಿದೆ. ಪರಿಣಾಮವಾಗಿ ಸುದೀಪ್ ಅವರನ್ನು ನೋಡಲೆಂದು ಬಂದಿದ್ದ ಅಭಿಮಾನಿಗಳು ನಿರಾಸೆಯಿಂದ ಮರಳುವಂತಾಗಿದೆ.
ಬಿಜೆಪಿ ಅಭ್ಯರ್ಥಿ ಪರ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಮತಕ್ಷೇತ್ರದ ಭರಮಸಾಗರ, ಸಿರಿಗೆರೆ ಗ್ರಾಮದಲ್ಲಿ ಸುದೀಪ್ ರೋಡ್ ಶೋ ನಿಗದಿಯಾಗಿತ್ತು. ಆದರೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಸಿರಿಗೆರೆ ಹೆಲಿಪ್ಯಾಡ್ಗೆ ಹೆಲಿಕಾಪ್ಟರ್ ಬರದೇ ರೋಡ್ ಶೋ ರದ್ದಾಗಿದೆ.
ಇದನ್ನೂ ಓದಿ: ಜೊತೆಗಿದ್ದವನ ಹೆಣವನ್ನೇ 2 ವರ್ಷ ಫ್ರಿಡ್ಜ್ನಲ್ಲಿಟ್ಟ; ಸತ್ತವನ ಹಣವನ್ನೇ ದಿನಗಟ್ಟಲೆ ಬಳಸಿಬಿಟ್ಟ!
ಸಿರಿಗೆರೆ, ಭರಮಸಾಗರ ಗ್ರಾಮದಲ್ಲಿ ಸುದೀಪ್ ರೋಡ್ ಶೋ ಬಳಿಕ ಹೊಳಲ್ಕೆರೆ, ಚಳ್ಳಕೆರೆಯಲ್ಲೂ ರೋಡ್ ಶೋ ನಡೆಯಬೇಕಿತ್ತು. ಆದರೆ ಅಲ್ಲಿನ ರೋಡ್ ಶೋ ಕೂಡ ರದ್ದುಗೊಂಡಿದೆ. ಎಲ್ಲ ಕಡೆ ಸುದೀಪ್ಗೆ ಕಾದಿದ್ದ ಅಭಿಮಾನಿಗಳು ನಿರಾಸೆಯಿಂದ ಮರಳುವಂತಾಗಿದೆ.