More

    ತಮಿಳುನಾಡು ರಾಜಕಾರಣಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ನಟಿ ತ್ರಿಷಾ!

    ಚೆನ್ನೈ: ನಟಿ ತ್ರಿಶಾ ಅವರು ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಐಎಡಿಎಂಕೆ ಮಾಜಿ ಸದಸ್ಯ ಎವಿ ರಾಜು ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವದಾಗಿ ಹೇಳಿದ್ದಾರೆ. ಫೆಬ್ರವರಿ 22 ಗುರುವಾರ ತ್ರಿಶಾ ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್​ ಖಾತೆ ಮೂಲಕ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ.

    ಇದನ್ನೂ ಓದಿ:ದೆಹಲಿಯಲ್ಲಿ ಕಾಂಗ್ರೆಸ್ ಜತೆಗಿನ ಮೈತ್ರಿ ಖಚಿತ?: ಕಾಂಗ್ರೆಸ್‌ ತಲೆಬಾಗುವಂತೆ ಮಾಡಿತೇ ಎಎಪಿ?

    ಮಾಧ್ಯಮಗಳ ಗಮನ ಸೆಳೆಯಲು ನೀಚ ಜನರು ಯಾವುದೇ ಹಂತಕ್ಕೆ ಬೇಕಾದರೂ ಇಳಿಯಲು ತಯಾರಾಗಿರುವುದು ಅಸಹ್ಯಕರವಾಗಿದೆ. ಈ ಕಾಮೆಂಟ್‌ಗಳನ್ನು ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಏನು ಹೇಳಬೇಕು ಮತ್ತು ಏನು ಮಾಡಬೇಕೆಂದು ನನ್ನ ಕಾನೂನು ತಂಡವು ನೋಡಿಕೊಳ್ಳುತ್ತದೆ” ಎಂದು ನಟಿ ತ್ರಿಷಾ ಟ್ವೀಟ್ ಮಾಡಿದ್ದಾರೆ.

    ನಿನ್ನೆ ಸಂಜೆ ತ್ರಿಷಾ ವಿರುದ್ಧ ಎವಿ ರಾಜು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸೇಲಂ ಪಶ್ಚಿಮ ಶಾಸಕ ವೆಂಕಟಾಚಲಂ ಅವರಿಂದ ನಟಿ 25 ಲಕ್ಷ ರೂ.ಗಳನ್ನು ಸೆಟ್ಲ್‌ಮೆಂಟ್ ಹಣವಾಗಿ ಪಡೆದಿದ್ದಾರೆ ಎಂದು ಅವರು ಹೇಳಿದ್ದರು. ಇದಾದ ನಂತರ, ಅವರ ಹೇಳಿಕೆ ತಕ್ಷಣವೇ ಟೀಕೆಗೆ ಗುರಿಯಾಯಿತು. ಅಲ್ಲದೆ ನಟಿ ಎವಿ ರಾಜು ವಿರುದ್ಧ ಕಾನೂನು ಕ್ರಮವನ್ನೂ ತೆಗೆದುಕೊಳ್ಳುವುದಾಗಿ ಹೇಳಿದ್ದು ತ್ರಿಷಾ ಬೆಂಬಲಕ್ಕೆ ಹಲವು ತಾರೆಯರು ಕೂಡ ಸಾಥ್ ನೀಡಿದರು.

    ರಾಜಕಾರಣಿಯಾಗಿರುವ ಎ ವಿ ರಾಜು ಓರ್ವ ನಟಿ ಬಗ್ಗೆ ತೀರಾ ಕೆಳಮಟ್ಟಕ್ಕಿಳಿದು ಮಾತನಾಡಿದ್ದಾರೆ. ಹೌದು, ಪಶ್ಚಿಮ ಸೇಲಂನ ಶಾಸಕ ಜಿ ವೆಂಕಟಚಲಂ ಅವರನ್ನು ಟೀಕಿಸುವ ಭರದಲ್ಲಿ ತ್ರಿಷಾ ಹೆಸರನ್ನು ಎಳೆದು ತಂದಿದ್ದಾರೆ. ಆ ಹಿರಿಯ ರಾಜಕಾರಣಿಗಾಗಿ ತ್ರಿಷಾಗೆ ದುಡ್ಡು ಕೊಟ್ಟು ನಮ್ಮ ರೆಸಾರ್ಟ್‌ ಕರೆಸಿಕೊಂಡಿದ್ದೆ ಎಂಬರ್ಥ ಹೇಳಿಕೆ ನೀಡಿ, ರಾಜು ಟೀಕೆಗೆ ಗುರಿಯಾಗಿದ್ದಾರೆ. ಅತ್ತ ತ್ರಿಷಾ ಕೂಡ ತಮ್ಮ ಬಗೆಗಿನ ಈ ಸ್ಟೇಟ್‌ಮೆಂಟ್‌ ಕುರಿತು ಗರಂ ಆಗಿದ್ದು, ಕಾನೂನು ಕ್ರಮ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

    ನೆಟ್ಟಿಗರ ಆಕ್ರೋಶ: ಇನ್ನು, ತ್ರಿಷಾ ಬಗ್ಗೆ ತುಚ್ಛವಾಗಿ ಹೇಳಿಕೆ ನೀಡಿರುವ ಎ ವಿ ರಾಜು ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜು ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಗರಂ ಆಗಿದ್ದು, ಓರ್ವ ನಟಿಯ ಬಗ್ಗೆ ಇಷ್ಟೊಂದು ಕೇವಲವಾಗಿ ಮಾತನಾಡಿರುವ ರಾಜುಗೆ ಕಾನೂನಿನ ಮೂಲಕ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

    ಕಿಂಗ್​ ಕೊಹ್ಲಿ ಮಗ ಅಕಾಯ್‌ ಹೆಸರಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts