ಬೆಂಗಳೂರು: ನಟ ಉಪೇಂದ್ರ ಸಿನಿಮಾ ಮತ್ತು ರಾಜಕೀಯ ಎಂದು ಸಖತ್ ಬ್ಯುಸಿಯಾಗಿದ್ದಾರೆ. ಉಪೇಂದ್ರ ಅವರು ಕೆಲವು ದಿನಗಳ ಹಿಂದೆ ಕಬ್ಜ ಸಿನಿಮಾ ಮೂಲಕವಾಗಿ ಸುದ್ದಿಯಾಗಿದ್ದರು. ಇದೀಗ ಹೊಸ ಮನೆ ಗೃಹಪ್ರವೇಶ ಮಾಡಿದ್ದಾರೆ.
ಕತ್ರಿಗುಪ್ಪೆ ಏರಿಯಾದಲ್ಲಿ ಭವ್ಯವಾದ ಬಂಗಲೆ ಹೊಂದಿರುವ ರಿಯಲ್ ಸ್ಟಾರ್ ಉಪೇಂದ್ರ ಇದೀಗ ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಸದಾಶಿವನಗರದಲ್ಲಿ ಅವರು ಹೊಸ ಮನೆ ಖರೀದಿಸಿದ್ದಾರೆ.
ಸದಾಶಿವನಗರದಲ್ಲಿ ಡಾ.ರಾಜ್ ಕುಮಾರ್ ಸೇರಿದಂತೆ ಅನೇಕ ಗಣ್ಯರ ಮನೆಗಳಿವೆ. ಹಾಗೂ ಅನೇಕ ರಾಜಕಾರಣಿಗಳ ನಿವಾಸಗಳು ಇದೇ ಏರಿಯಾದಲ್ಲಿವೆ. ಸ್ಯಾಂಕಿ ಟ್ಯಾಂಕ್ ಹತ್ತಿರದಲ್ಲೇ ಈ ನಿವಾಸವಿದ್ದು, ಶನಿವಾರ ಅಧಿಕೃತವಾಗಿ ಗೃಹಪ್ರವೇಶ ಮಾಡಿದ್ದಾರಂತೆ ಉಪ್ಪಿ ಮತ್ತು ಪ್ರಿಯಾಂಕಾ.
ಇದನ್ನೂ ಓದಿ: ಕಾಫಿ ಬೀಜಗಳಲ್ಲಿ ಅಡಗಿರುವ ವ್ಯಕ್ತಿಯ ಮುಖವನ್ನು 8 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ..?
ಹೊಸ ಮನೆಯ ಗೃಹಪ್ರವೇಶ ಕೂಡ ಆಗಿದ್ದು, ಚಿತ್ರರಂಗದ ಅನೇಕ ಕಲಾವಿದರು, ತಂತ್ರಜ್ಞರು ಹಾಗೂ ಗಣ್ಯರು ಭಾಗಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಕತ್ರಿಗುಪ್ಪೆ ನಿವಾಸದಿಂದ ಈ ಹೊಸ ಮನೆಗೆ ರಿಯಲ್ ಸ್ಟಾರ್ ಕುಟುಂಬ ಶಿಫ್ಟ್ ಆಗಲಿದೆ.
77 ವರ್ಷದ ಬಳಿಕ ಗ್ರಾಮಕ್ಕೆ ಭೇಟಿ ಕೊಟ್ಟ 98 ವರ್ಷದ ವೃದ್ಧ!; ಮುಂದೆ ಆಗಿದ್ದೇನು?