ವಿಜಯವಾಣಿ ಸುದ್ದಿಜಾಲ ಬೆಂಗಳೂರು
‘ಅಪೂರ್ವ’ ಚಿತ್ರದ ಮೂಲಕ ನಾಯಕಿಯಾಗಿ ಪದಾರ್ಪಣೆ ಮಾಡಿದ ನಟಿ ಅಪೂರ್ವ, ನಂತರ ‘ವಿಕ್ಟರಿ 2’, ‘ಕೃಷ್ಣ ಟಾಕೀಸ್’, ‘ಪೆಂಟಗನ್’ ಚಿತ್ರಗಳಲ್ಲಿ ಮಿಂಚಿದ್ದರು. ಇದೀಗ ಅಪೂರ್ವ ಡೈರೆಕ್ಟರ್ ಕ್ಯಾಪ್ ಧರಿಸಿದ್ದಾರೆ. ಚೊಚ್ಚಲ ಬಾರಿಗೆ ‘ಓ ನನ್ನ ಚೇತನ’ ಎಂಬ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ.
ಇದನ್ನೂ ಓದಿ : BBKS10: ಮಾನವೀಯತೆ ಅಂತ ಹೋದ್ರೆ, ಮುಂದೇನೆ ತೋಡ್ತಾರೆ ಹಳ್ಳ; ವರ್ತೂರು ಹೇಳಿಕೆಗೆ ‘ಬೆಂಕಿ’ ಕಿಡಿ!
‘ಮೊದಲಿನಿಂದಲೂ ನಿರ್ದೇಶನದ ಕನಸಿತ್ತು. ಅದು ಈ ಚಿತ್ರದ ಮೂಲಕ ನನಸಾಗಿದೆ. ಮಕ್ಕಳ ಸಿನಿಮಾ ಆಗಿದ್ದರೂ ಕಮರ್ಷಿಯಲ್ ಅಂಶಗಳೊಂದಿಗೆ ಈ ಸಿನಿಮಾ ಮಾಡಿದ್ದೇವೆ’ ಎಂದು ಮಾಹಿತಿ ನೀಡುತ್ತಾರೆ ಅಪೂರ್ವ. ಇಂದಿನ ಮಕ್ಕಳ ಮೊಬೈಲ್ ಅಡಿಕ್ಷನ್ ಸುತ್ತ ಚಿತ್ರದ ಕಥೆ ಸಾಗುತ್ತದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಪಾತ್ರವಾಗಿರುವ ಈ ಚಿತ್ರ ಇದೀಗ ರಿಲೀಸ್ಗೆ ರೆಡಿಯಾಗಿದೆ.
ಇದನ್ನೂ ಓದಿ : BBKS10: ಲಿಂಗ ಪರಿವರ್ತನೆ ಬಗ್ಗೆ ಶಾಕಿಂಗ್ ಸತ್ಯ ಬಿಚ್ಚಿಟ್ಟ ನೀತು!; ವಿಡಿಯೋ ನೋಡಿ
‘ಓ ನನ್ನ ಚೇತನ’ ಚಿತ್ರದಲ್ಲಿ ಮಾಸ್ಟರ್ ಪ್ರತೀಕ್, ಮಾಸ್ಟರ್ ಪ್ರೀತಮ್, ಬೇಬಿ ದಾನೇಶ್ವರಿ, ಬೇಬಿ ಡಿಂಪನಾ, ಬೇಬಿ ಮೋನಿಕಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ‘ಅಲೆಮಾರಿ’ ಖ್ಯಾತಿಯ ನಿರ್ದೇಶಕ ಸಂತು ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಉಳಿದಂತೆ ಪ್ರದೀಪ್ ವರ್ಮಾ ಸಂಗೀತ ನಿರ್ದೇಶನ, ಗುರುಪ್ರಶಾಂತ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ. ಹಳ್ಳಿ ಹಿನ್ನೆಲೆಯಲ್ಲಿ ನಡೆಯುವ ಕಥೆಯಾಗಿದ್ದು, ಈಗಾಗಲೇ ಎರಡು ಹಾಡುಗಳು ಬಿಡುಗಡೆಯಾಗಿವೆ.