More

    ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಭೇಟಿಯಾದ ನಟಿ ಹರ್ಷಿಕಾ ಪೂಣಚ್ಚ-ಭುವನ್ ದಂಪತಿ

    ಹುಬ್ಬಳ್ಳಿ: ಕನ್ನಡದ ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿ, ಇತ್ತೀಚೆಗೆ ಬೆಂಗಳೂರಿನ ಪುಲಕೇಶಿ ನಗರದಲ್ಲಿ ತಮ್ಮ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಖುದ್ದಾಗಿ ಭೇಟಿಯಾಗಿದ್ದು, ಘಟನೆ ಬಗ್ಗೆ ಹೆಚ್ಚು ಸಮಯ ಚರ್ಚೆ ನಡೆಸಿದ್ದಾರೆ.

    ಇದನ್ನೂ ಓದಿ: 6 ವರ್ಷಗಳ ಬಳಿಕ ಈ ದಂಪತಿ…! ಸುದ್ದಿ ಕೇಳಿ ನಾವೇ ನಕ್ಕಿದ್ದೇವೆ, ಕಡೆಗೂ ಸ್ಪಷ್ಟನೆ ಕೊಟ್ಟ ಬಿಗ್ ಬಾಸ್​ ವಿಜೇತ

    ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದಕ್ಕಿಸಿಕೊಡುವಂತೆ ಸಚಿವರಿಗೆ ಮನವಿ ಮಾಡಿದ್ದಾರೆ. ನಮ್ಮ ಮೇಲೆ ಹಲ್ಲೆಗೆ ಯತ್ನಿಸಿ, ಗಲಾಟೆ ಮಾಡಿದ ಮೂವರನ್ನು ಗುರುತಿಸಿದ್ದೇವೆ.‌ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಕೆಲ ವ್ಯಕ್ತಿಗಳನ್ನು ತೋರಿಸಿದ್ದು, ನಮ್ಮ ಮೇಲೆ ಗಲಾಟೆ ಮಾಡಿದವರ ಮುಖ ಛಾಯೆ ಇರುವ ವ್ಯಕ್ತಿಗಳನ್ನು ಸದ್ಯ ಗುರುತಿಸಿದ್ದೇವೆ ಎಂದು ದಂಪತಿಗಳು ಸಚಿವರಿಗೆ ವಿವರಿಸಿದ್ದಾರೆ.

    ನಮಗೆ ಆದಂತೆ ಬೇರೆ ಯಾರಿಗೂ ಆಗಬಾರದು. ಹಾಗಾಗಿ ಪೊಲೀಸರಿಗೆ ದೂರು ಕೊಟ್ಟಿದ್ದು, ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವ ಭರವಸೆ ಹೊಂದಿದ್ದೇವೆ ಎಂದು ಹರ್ಷಿಕಾ ಪೂಣಚ್ಚ ಹೇಳಿದ್ದಾರೆ.

    6 ವರ್ಷಗಳ ಬಳಿಕ ಈ ದಂಪತಿ…! ಸುದ್ದಿ ಕೇಳಿ ನಾವೇ ನಕ್ಕಿದ್ದೇವೆ, ಕಡೆಗೂ ಸ್ಪಷ್ಟನೆ ಕೊಟ್ಟ ಬಿಗ್ ಬಾಸ್​ ವಿಜೇತ

    4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts