ಬೆಂಗಳೂರು: ಬಿಗ್ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾದನಾಯಕಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವೃದ್ಧಾಶ್ರಮವೊಂದರಲ್ಲಿ ನೇಣುಬಿಗಿದುಕೊಂಡು ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಬಿಗ್ಬಾಸ್ ಸೀಸನ್ 3ರ ಸ್ಪರ್ಧಿಯಾಗಿದ್ದ ಜಯಶ್ರೀ, ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು. ಉಪ್ಪು ಹುಳಿ ಖಾರ ಮತ್ತು ಶಿರಾಡಿ ಘಾಟ್ ಚಿತ್ರದಲ್ಲಿ ಜಯಶ್ರೀ ನಟಿಸಿದ್ದರು.
2020ರ ಜುಲೈ ತಿಂಗಳಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದ ಜಯಶ್ರೀ, 2019ರ ಸೆಪ್ಟೆಂಬರ್ನಲ್ಲಿ ತನ್ನ ಸೋದರ ಮಾವನ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದರು. ‘ಮೊದಲಿನಿಂದಲೂ ನನಗೆ ನಮ್ಮ ಮಾವ ಕಿರುಕುಳ ಕೊಡುತ್ತಿದ್ದರು. ನಾನು ಚಿಕ್ಕವಳಿದ್ದಾಗ ಲೈಂಗಿಕ ಕಿರುಕುಳ ನೀಡುತ್ತಿದ್ದರು. ನಮ್ಮ ಮಾವ ಒಬ್ಬ ಸೈಕೋ. ಆಸ್ತಿ ವಿಚಾರಕ್ಕೆ ನಮ್ಮನ್ನು ಮನೆಯಿಂದ ಮಾವ ಹೊರಹಾಕಿದ್ದಾರೆ’ ಎಂದು ಮಾವ ಗಿರೀಶ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದಕ್ಕೂ ಮುನ್ನಾ, ಸ್ವತಃ ಜಯಶ್ರೀ ಅವರೇ ಫೇಸ್ಬುಕ್ನಲ್ಲಿ, ‘ನನ್ನಿಂದಾಗದು, ಇಡೀ ಜಗತ್ತಿಗೆ ಮತ್ತು ಖಿನ್ನತೆಗೆ ಗುಡ್ಬೈ’ ಎಂದು ಬರೆದುಕೊಂಡಿದ್ದರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಜಯಶ್ರೀ, ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ಕೆಲ ದಿನಗಳಿಂದ ಇದ್ದರು. ಇದೀಗ ನೇಣಿಗೆ ಶರಣಾಗಿ ಬದುಕಿಗೆ ಗುಡ್ಬೈ ಹೇಳಿದ್ದಾರೆ.
ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…
ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕುಮಾರಸ್ವಾಮಿ!