ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ್ದು ನಿಜ; ಮದುವೆ ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟ ನಟಿ ಪ್ರೇಮಾ

blank

ಬೆಂಗಳೂರು: ಇತ್ತೀಚೆಗೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿರುವ ಕೊರಗಜ್ಜನ ಸನ್ನಿಧಿಗೆ ಸ್ಯಾಂಡಲ್​ವುಡ್ ನಟಿ ಪ್ರೇಮಾ ಭೇಟಿ ನೀಡಿ ಪ್ರಾರ್ಥಿಸಿಕೊಂಡಿದ್ದರು. ಈ ವೇಳೆ ತಾನು ಎರಡನೇ ಮದುವೆಯಾಗುವುದಕ್ಕೆ ಪ್ರೇಮಾ ಕೊರಗಜ್ಜನಲ್ಲಿ ಅಪ್ಪಣೆ ಕೇಳಿದ್ದಾರೆ ಎಂಬ ಸುದ್ದಿ ಸಾಕಷ್ಟು ವೈರಲ್ ಆಗಿತ್ತು. ಇದೀಗ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಪ್ರೇಮಾ, ಕಂಕಣ ಭಾಗ್ಯ ಕೂಡಿ ಬಂದಾಗ ಮದುವೆ ಆಗುತ್ತದೆ. ಆಗ ಎಲ್ಲರಿಗೂ ಹೇಳಿಯೇ ವಿವಾಹವಾಗುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನಟಿ ಪ್ರೇಮಾ ಕೊರಗಜ್ಜನ ಸನ್ನಿಧಿಗೆ ಭೇಟಿ ಕೊಟ್ಟ ವಿಡಿಯೋ ವೈರಲ್ ಆಗಿತ್ತು. ಕೊರಗಜ್ಜನ ಬಳಿ ಮದ್ವೆಗೆ ಅಪ್ಪಣೆ ಕೇಳಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಸೆನ್ಸೇಷನ್ ಕ್ರಿಯೇಟ್ ಮಾಡಿತ್ತು. ಇದೀಗ ಪ್ರೇಮಾ ಮಾತನಾಡುತ್ತಾ, ನಾವು ಸಂಬಂಧಿಕರೊಬ್ಬರ ಮದುವೆಗೆ ತೆರಳಿದ್ದೆವು. ಈ ವೇಳೆ ನಾವು ದೈವ ಸನ್ನಿಧಿಗೆ ಹೋಗಿದ್ದು ನಿಜ. ಆದರೆ ಮದುವೆಗೆ ಅಪ್ಪಣೆ ಕೇಳುವುದಕ್ಕೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರೇಮಾ ಮದುವೆ ಆಗಲು ಅನುಮತಿ ಕೇಳಲು ಹೋಗಿದ್ದಾರೆ ಎನ್ನುವ ಸುಳ್ಳು ಸುದ್ದಿಯನ್ನು ಕೆಲವರು ಹಬ್ಬಿಸಿದ್ದಾರೆ. ಅಷ್ಟಕ್ಕೂ ನಾನು ಓಡಿ‌ ಹೋಗಿ ಮದುವೆ ಆಗುವುದಿಲ್ಲ. ಎಲ್ಲರಿಗೂ ಹೇಳಿಯೇ ವಿವಾಹ ಆಗುತ್ತೇನೆ ಎಂದು ಪ್ರೇಮಾ ಪ್ರತಿಕ್ರಿಯಿಸಿದ್ದಾರೆ.

Share This Article

ಅಧಿಕ ಬಿಪಿ ಇರುವವರು ಯಾವ ಆಹಾರದಿಂದ ದೂರವಿರಬೇಕು ಎಂದು ನಿಮಗೆ ತಿಳಿದಿದೆಯೇ? high blood pressure

high blood pressure: ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಬಿಪಿ ಸಮಸ್ಯೆಯೂ ಒಂದು. ಅಧಿಕ…

ಶಿವನ ಕೃಪೆಗೆ ಪಾತ್ರರಾಗಲು ಈ ಒಂದು ಕೆಲಸ ಮಾಡಬೇಕು! Lord Shiva Worship

Lord Shiva Worship: ಪರಮೇಶ್ವರ ಹಿಂದೂಗಳು ಹೆಚ್ಚು ಪೂಜಿಸುವ ದೇವರುಗಳಲ್ಲಿ ಒಂದಾಗಿದೆ. ಭಗವಂತನನ್ನು ಒಂದೊಂದು ಸ್ಥಳದಲ್ಲಿ…

ಈ ದಿನಾಂಕಗಳಂದು ಜನಿಸಿದ ಮಹಿಳೆಯರು ತಮ್ಮ ಗಂಡನಿಗೆ ಅದೃಷ್ಟ ಹೊತ್ತು ತರುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಸಂಖ್ಯೆಗಳು ನಮ್ಮ…