More

    300 ಪ್ರಪೋಸಲ್‌ ರಿಜೆಕ್ಟ್‌ ಮಾಡಿದ್ದಾರಂತೆ ಕನ್ನಡದ ನಟಿ! ಈ ಮಾತು ಕೇಳಿ ಕಿಚ್ಚ ಸುದೀಪ್​ ಹೇಳಿದ್ದೇನು ಗೊತ್ತಾ ?

    ಬೆಂಗಳೂರು: ವೈಷ್ಣವಿ ಗೌಡ ಅವರು ಅಗ್ನಿಸಾಕ್ಷಿ ಸೀರಿಯಲ್‌ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಹೃದಯ ಗೆದ್ದಿದ್ದರು. ಸೀರಿಯಲ್‌ನಲ್ಲಿ ಸೀತೆಯಾಗಿ ಸಾಂಪ್ರದಾಯಿಕ ಹೆಣ್ಣಿನಂತೆ ಕಾಣಿಸುವ ಇವರು ನಿಜ ಜೀವನದಲ್ಲಿ ತುಂಬಾ ಮಾಡರ್ನ್‌ ಇವರಿಗೆ ಸುಮಾರು 300ಕ್ಕೂ ಅಧಿಕ ಲವ್‌ ಪ್ರಪೋಸ್‌ಗಳು ಬಂದಿದ್ದರೂ ಒಪ್ಪಿಕೊಂಡಿಲ್ಲವಂತೆ.

    ಇದನ್ನೂ ಓದಿ:9ನೇ ತರಗತಿ ಮಕ್ಕಳಿಗೆ ಡೇಟಿಂಗ್​, ಸಂಬಂಧಗಳ ಅಧ್ಯಾಯ ಪರಿಚಯಿಸಿದ ಸಿಬಿಎಸ್​ಇ

    ಅಗ್ನಿಸಾಕ್ಷಿ ಸೀರಿಯಲ್ ಮುಗಿದ ಬಳಿಕ ತನ್ನದೇ ಯೂಟ್ಯೂಬ್ ಚಾನೆಲ್ ನಲ್ಲಿ ಬ್ಯುಸಿ ಆಗಿದ್ದ ನಟಿ ವೈಷ್ಣವಿ ಗೌಡ ಇದೀಗ ಮತ್ತೆ ಕಿರುತೆರೆಗೆ ರೀ ಎಂಟ್ರಿ ಕೊಟ್ಟಿದ್ದಾರೆ. ಜೀ ಕನ್ನಡದ ಸೀತಾ ರಾಮ ಸೀರಿಯಲ್ ಮೂಲಕ ಮತ್ತೆ ಟಿವಿ ಪರದೆ ಮೇಲೆ ಮಿಂಚುತ್ತಿದ್ದಾರೆ.

    300 ಪ್ರಪೋಸಲ್‌ ರಿಜೆಕ್ಟ್‌ ಮಾಡಿದ್ದಾರಂತೆ ಕನ್ನಡದ ನಟಿ! ಈ ಮಾತು ಕೇಳಿ ಕಿಚ್ಚ ಸುದೀಪ್​ ಹೇಳಿದ್ದೇನು ಗೊತ್ತಾ ?

    ವೈಷ್ಣವಿಗೌಡ ಅವರ ಸೌಂದರ್ಯ ಹಾಗೂ ನಟನೆಯನ್ನು ನೋಡಿ ಲಕ್ಷಾಂತರ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಗ್ನಿಸಾಕ್ಷಿ ಧಾರಾವಾಹಿಯ ನಂತರ ಬಿಗ್‌ಬಾಸ್‌ ಮನೆಯಲ್ಲೂ ಕಾಣಿಸಿಕೊಂಡ ವೈಷ್ಣವಿ ಇಲ್ಲಿಯೂ ಕೂಡ ಹೆಚ್ಚಿನ ರಗಳೆ ಮಾಡಿಕೊಳಳದೇ ಸೀದಾ-ಸಾದಾ ನಡತೆಯಿಂದ ಜನರ ಮನಸ್ಸನ್ನು ಗೆದ್ದಿದ್ದಳು.

    ಪ್ರಸ್ತುತ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಸೀತಾರಾಮ ಧಾರಾವಾಹಿಯಲ್ಲಿ ಸೀತೆಯಾಗಿ ಕಾಣಿಸಿಕೊಂಡಿರುವ ವೈಷ್ಣವಿಗೌಡ ಅವರಿಗೆ ಅಭಿಮಾನಿಗಳು ಪುನಃ ಹಾರೈಸಿ ಕೈ ಹಿಡಿದಿದ್ದಾರೆ. ಕನ್ನಡ ಬಿಗ್‌ಬಾಸ್ ಸೀಸನ್ 10 ಮುಕ್ತಾಯ ಆಗುತ್ತಿದ್ದಂತೆಯೇ ವೈಷ್ಣವಿಗೌಡ ಅವರು ಬಿಗ್‌ಬಾಸ್‌ ಸ್ಪರ್ಧಿಯಾಗಿ ಪಾಲ್ಗೊಂಡಿದ್ದ ಎಪಿಸೋಡ್‌ನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಬಿಗ್ ಬಾಸ್ ವೇದಿಕೆಯಲ್ಲಿ ಕಿಚ್ಚ ಸುದೀಪ್ ಅವರು ವೈಷ್ಣವಿಗೌಡ ಅವರಿಗೆ ನಿಮ್ಮ ಪ್ರಕಾರ ಅಂದಾಜು ಎಷ್ಟು ಲವ್ ಪ್ರಪೋಸಲ್ ಬಂದಿರಬಹುದು ಎಂದು ಕೇಳಿದ್ದಾರೆ. ಸುದೀಪ್ ಪ್ರಶ್ನೆಗೆ ಉತ್ತರಿಸಿದ ವೈಷ್ಣವಿ, 200ರಿಂದ 300 ಪ್ರಪೋಸಲ್‌ಗಳು ಬಂದಿವೆ ಎಂದು ಹೇಳಿದ್ದಾರೆ. ಇದನ್ನು ಕೇಳಿದ ಸುದೀಪ್ ಆಹ್… ಎಂದು ಶಾಕ್ ಆಗಿ ಕೇಳುತ್ತಾ ಈ 200.., 300 ಪ್ರಪೋಸಲ್‌ಗಳಲ್ಲಿ ಯಾವುದೂ ಕರೆಕ್ಟ್ ಆಗಿದೆ ಅಂತ ಅನಿಸಲೇ ಇಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.

    ನನಗೆ ಲವ್ ಪ್ರಪೋಸಲ್‌ಗಳನ್ನು ನೋಡಬೇಕು ಅಂತಾನೇ ಅನಿಸಲಿಲ್ಲ ಸರ್. ನಾನು ಯಾವಾಗಲೂ ಮನಸ್ಸಿನ ಮಾತುಗಳನ್ನು ಕೇಳುವಂತಹ ಹುಡುಗಿ. ಆದ್ದರಿಂದ ನನ್ನ ಮನಸ್ಸು ಕೂಡ ಯಾವುದೇ ಪ್ರಪೋಸಲ್‌ಗಳನ್ನು ನೋಡುವುದಕ್ಕೆ ಪ್ರೇರಣೆಯೇ ಆಗಲಿಲ್ಲ ಎಂದಿದ್ದಾರೆ. ಯಾವುದೇ ಪ್ರಪೋಸಲ್‌ಗಳು ನನಗೆ ಕನೆಕ್ಟ್ ಆಗಲೇ ಇಲ್ಲ. ಯಾವುದೇ ಪ್ರಪೋಸ್‌ಗಳ ವೈಬ್ಸ್ ನನ್ನ ಮನಸ್ಸಿಗೆ ಮುಟ್ಟಲಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸುದೀಪ್ ಅವುಗಳನ್ನು ನೋಡದೇ ಹೇಗೆ ಕನೆಕ್ಟ್ ಆಗುತ್ತದೆ ಎಂದು ಕೆಣಕಿದ್ದಾರೆ.

    ಆಗ ಅದು ನಮ್ಮ ಮನಸ್ಸಿಗೆ ಅನ್ನಿಸಬೇಕು ಸರ್.. ಒಬ್ಬರನ್ನು ಪ್ರೀತಿ ಮಾಡಬೇಕು ಅಂದರೆ ಅವರ ಮುಖವನ್ನು ನೋಡಬೇಕು ಅಂತೇನಿಲ್ಲ ಎಂದಿದ್ದಾರೆ. ಪುನಃ ಶಾಕ್‌ ಆದ ಸುದೀಪ್‌ ಮತ್ತೆ ಇನ್ನೇನು ನೋಡಬೇಕು ಎಂದು ಕೇಳಿದ್ದಾರೆ. ಇದಕ್ಕೆ ಸುದೀಪ್ ಸೇರಿದಂತೆ ಇಡೀ ವೇದಿಕೆಯೇ ನಗೆಗಡಲಲ್ಲಿ ತೇಲಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

    ಮದುವೆ ಬಗ್ಗೆ ಸೀಕ್ರೆಟ್ ಬಿಚ್ಚಿಟ್ಟ ‘ಅನಿಮಲ್​’ ನಟಿ ತೃಪ್ತಿ ದಿಮ್ರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts