ಅಡಕೆ ವ್ಯಾಪಾರಿಗೆ ಗುಂಡೇಟು ತಗುಲಿ ಗಾಯ

gundetu

ಮಂಜೇಶ್ವರ: ದಾರಿಯಲ್ಲಿ ನಡೆದು ಸಾಗುತ್ತಿದ್ದ ಅಡಕೆ ವ್ಯಾಪಾರಿಗೆ ಗುಂಡೇಟು ತಗುಲಿರುವ ಘಟನೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ನಾಟಕ ಗಡಿಭಾಗ ಮುಡಿಪು ಸಮೀಪದ ಕಜೆಪದವು ಎಂಬಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.

ಬಾಕ್ರಬೈಲ್ ನಡೀಬೈಲು ನಿವಾಸಿ ಸವಾದ್(20) ಎಂಬಾತ ಶೂಟೌಟ್ ತಗುಲಿ ಗಾಯಗೊಂಡವರು. ಭಾನುವಾರ ಸಂಜೆ ವೇಳೆ ಕಾಡಿನ ನಡುವೆ ದಾರಿಯಲ್ಲಿ ತೆರಳುವ ಸಂದರ್ಭ ಕಜೆಪದವು ತಿರುವಿನಲ್ಲಿ ಈ ಘಟನೆ ನಡೆದಿದೆ. ಇದರಿಂದ ಕಾಲಿಗೆ ಗಂಭೀರ ಗಾಯಗೊಂಡ ಸಾವಾದ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಣಿ ಬೇಟೆ ಬಂದವರು ಹಂದಿಗೆ ಗತಿ ಕಾಣಿಸಲು ಹಾದಿಯಲ್ಲೇ ಸ್ಫೋಟಕ ವಸ್ತು ಇರಿಸಿದ್ದರು ಎನ್ನಲಾಗಿದೆ. ಇದನ್ನು ಗಮನಿಸದ ಸವಾದ್ ನಡಕೊಂಡು ಸಾಗುವ ವೇಳೆ ಮೆಟ್ಟಿದ ಕಾರಣ ಅವರಿಗೆ ತಗುಲಿರುವ ಸಾಧ್ಯತೆ ಇದೆ. ಇದರಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶೂಟೌಟ್ ಮಾಡಿದ ವ್ಯಕ್ತಿಯ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಮಂಜೇಶ್ವರ ಪೊಲೀಸರು ತಿಳಿಸಿದ್ದಾರೆ.
ಮಂಜೇಶ್ವರ ಠಾಣಾ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್, ಜಿಪಂ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಮತ್ತಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ಸಹಸವಾರನಿಗೆ ಗಾಯ

ಸುಸ್ಥಿರ ಅಭಿವೃದ್ಧಿಗೆ ಪ್ರಾಕೃತಿಕ ಸಂಪನ್ಮೂಲ ಸಂರಕ್ಷಣೆ : ರಮೇಶ ಶೇಣವ ಪ್ರತಿಪಾದನೆ

Share This Article

ಜಸ್ಟ್​ ಈ ಸಣ್ಣ ಕೆಲಸ ಮಾಡಿ… ನಿಮ್ಮ ಮುಖದ ಮೇಲಿನ ಮೊಡವೆಗಳನ್ನು ಸುಲಭವಾಗಿ ಕಡಿಮೆ ಮಾಡಿಕೊಳ್ಳಿ! Glowing Skin

Glowing Skin : ಪ್ರತಿಯೊಬ್ಬರೂ ಆರೋಗ್ಯಕರ ಮತ್ತು ಹೊಳೆಯುವ ಚರ್ಮವನ್ನು ಬಯಸುತ್ತಾರೆ. ಆದರೆ, ಪ್ರಸ್ತುತ ಕಾಲದಲ್ಲಿ,…

ಸಾಧನೆ ಸಂಭ್ರಮಿಸೋಣ ಸೇವೆಗೆ ಅಣಿಯಾಗೋಣ

ಮೊನ್ನೆಯಷ್ಟೇ ಕೇಂದ್ರ ಲೋಕಸೇವಾ ಆಯೋಗದ ಫಲಿತಾಂಶ ಬಂದಿತು. ಈ ಫಲಿತಾಂಶ ತಂದ ಸಂತಸ ಮತ್ತು ಸಂದೇಶ…

ಅನಾನಸ್​ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳು ಗೊತ್ತಾ! ಆರೋಗ್ಯದ ಪ್ರಯೋಜನ ತಿಳಿಯಿರಿ.. Health Tips

Health Tips : ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ಆಕರ್ಷಕ ಹಳದಿ ಹಣ್ಣಾದ ಅನಾನಸ್,…