More

    ಆದರ್ಶ ಗ್ರಾಮವನ್ನಾಗಿಸಲು ಸಹಕಾರ ಅಗತ್ಯ: ಸಂಸದೆ ಸುಮಲತಾ ಅಂಬರೀಷ್ ಮನವಿ

    ಮಂಡ್ಯ: ಇಂಡುವಾಳು ಗ್ರಾಮವನ್ನು ಸಂಸದರ ಆದರ್ಶ ಗ್ರಾಮ ಯೋಜನೆಗೆ ಆಯ್ಕೆ ವಾಡಿಕೊಳ್ಳಲಾಗಿದ್ದು, ಅಭಿವೃದ್ಧಿ ಮಾಡಲು ಗ್ರಾಮಸ್ಥರ ಸಹಕಾರ ಅಗತ್ಯ ಎಂದು ಸಂಸದೆ ಸುಮಲತಾ ಅಂಬರೀಷ್ ಮನವಿ ಮಾಡಿದರು.
    ತಾಲೂಕಿನ ಇಂಡುವಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಸಂಸದರ ಆದರ್ಶ ಗ್ರಾಮ ಯೋಜನೆ ಅನುಷ್ಠಾನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ವಾತನಾಡಿದರು.
    ರಸ್ತೆ, ಒಳಚರಂಡಿ, ಶಾಲೆ, ಪ್ರವಾಸಿ ತಾಣಗಳು, ವಸತಿ, ಸ್ಮಶಾನ, ಶೌಚಗೃಹ ಹಾಗೂ ಇನ್ನಿತರ ಕಾಮಗಾರಿಗಳನ್ನು ಆದರ್ಶ ಗ್ರಾಮದ ಯೋಜನೆಯಡಿ ತೆಗೆದುಕೊಳ್ಳಲು ಅವಕಾಶವಿದೆ. ಸಂಬಂಧಿಸಿದ ಇಲಾಖೆಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
    ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ವಾತನಾಡಿ, ಇಂಡುವಾಳು ಗ್ರಾಮದಲ್ಲಿ ಉತ್ತಮ ಯೋಜನೆಗಳನ್ನು ರೂಪಿಸಿ ಇತರ ಗ್ರಾಮಗಳಿಗೆ ವಾದರಿಯಾಗಿ ಅಭಿವೃದ್ಧಿಪಡಿಸಬೇಕು. ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ತಾಣಗಳನ್ನು ಗುರುತಿಸಿ ಕುಡಿಯುವ ನೀರು, ಪ್ರವಾಸಿ ಸೂಚನಾ ಫಲಕ ಅಳವಡಿಸಬೇಕು ಎಂದರು.
    ಜಿಲ್ಲಾಧಿಕಾರಿ ಎಸ್.ಅಶ್ವಥಿ, ಎಸಿಗಳಾದ ಆರ್.ಐಶ್ವರ್ಯಾ, ಬಿ.ಸಿ.ಶಿವಾನಂದಮೂರ್ತಿ, ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ, ತಹಸೀಲ್ದಾರ್ ಕುಂಞ ಅಹಮದ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts