blank

ಆದರ್ಶ ಶಾಲೆ ಪ್ರವೇಶ ಪರೀಕ್ಷೆ ಸುಸೂತ್ರ

blank

ದೇವದುರ್ಗ: ಪಟ್ಟಣದ ಮೂರು ಕೇಂದ್ರಗಳಲ್ಲಿ ಭಾನುವಾರ ಆದರ್ಶ ವಿದ್ಯಾಲಯಗಳ ಪ್ರವೇಶ ಪರೀಕ್ಷೆ ಶಾಂತಿಯುತವಾಗಿ ನಡೆಯಿತು. ಕೇಂದ್ರಕ್ಕೆ ಬಿಇಒ ಕೆ.ಮಹಾದೇವಯ್ಯ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿತು.

ಬಿಇಒ ಕೆ.ಮಹಾದೇವಯ್ಯ ಮಾತನಾಡಿ, ಪಟ್ಟಣದ ಡಾನ್ ಬಾಸ್ಕೋ ಶಿಕ್ಷಣ ಸಂಸ್ಥೆ, ಸರ್ಕಾರಿ ಕನ್ಯಾ ಪ್ರೌಢಶಾಲೆ, ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕೇಂದ್ರ ತೆರೆಯಲಾಗಿತ್ತು. ಪರೀಕ್ಷೆಗೆ 473 ಬಾಲಕರು, 442 ಬಾಲಕಿಯರು ಸೇರಿ 915 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.

ಅದರಲ್ಲಿ 424 ಬಾಲಕರು, 399 ಬಾಲಕಿಯರು ಸೇರಿ 823 ಮಕ್ಕಳು ಪರೀಕ್ಷೆ ಬರೆದಿದ್ದಾರೆ. 92 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಪರೀಕ್ಷೆಗೆ ಬಿಗಿಭದ್ರತೆ ಒಗಿಸುವ ಜತೆಗೆ ವಿಡಿಯೋ ರೇಕಾರ್ಡ್, ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಶಿವರಾಜ ಪೂಜಾರಿ, ಡಯಟ್ ಉಪನ್ಯಾಸಕ ರಾಜೇಂದ್ರ, ಮುರಳೀಧರ್‌ರಾವ್ ಕುಲಕರ್ಣಿ, ಪರೀಕ್ಷೆ ಅಧೀಕ್ಷಕರಾದ ರಮೇಶ ಕಟ್ಟಮನಿ, ಮೃತ್ಯುಂಜಯ, ನಾಗರಾಜ ಪಾಟೀಲ್ ಇತರರಿದ್ದರು.

Share This Article

ಬೇಸಿಗೆಯಲ್ಲಿ ಗುಂಗುರು ಕೂದಲಿನ ಆರೈಕೆ ಮಾಡುವುದು ಹೇಗೆ ಗೊತ್ತಾ? curly hair

curly hair: ಗುಂಗುರು ಕೂದಲು ತುಂಬಾ ಸುಂದರವಾಗಿ ಕಾಣುತ್ತದೆ, ಇದಕ್ಕೆ ಸರಿಯಾದ ಆರೈಕೆಯ ಅಗತ್ಯವಿರುತ್ತದೆ. ನೀವು…

ಅಪ್ಪಿತಪ್ಪಿಯೂ ಈ ದಿನ ಪೊರಕೆಯನ್ನು ಖರೀದಿಸಬೇಡಿ! ಖಂಡಿತ ತೊಂದರೆಗೆ ಸಿಲುಕುತ್ತೀರಿ.. broom

broom: ಹಿಂದೂಗಳು ಪೊರಕೆಯನ್ನು ಲಕ್ಷ್ಮಿ ದೇವಿಯ ಸಾಕಾರವೆಂದು ಪರಿಗಣಿಸುತ್ತಾರೆ. ಭಕ್ತರು ಲಕ್ಷ್ಮಿ ದೇವಿಯು ಪೊರಕೆಗಳಲ್ಲಿ ವಾಸಿಸುತ್ತಾಳೆ…

ಜೈಲುಗಳಲ್ಲಿ ಕೈದಿಗಳಿಗೆ ವಿಶೇಷ ‘ಲೈಂಗಿಕ ಕೊಠಡಿಗಳು’! Prison

Prison: ಇಟಲಿ ಸರ್ಕಾರ ಒಂದು ವಿನೂತನ ನಿರ್ಧಾರ ತೆಗೆದುಕೊಂಡಿದೆ. ಕೈದಿಗಳ ಗೌಪ್ಯತೆಯ ಹಕ್ಕುಗಳನ್ನು ಗೌರವಿಸಿ, ಇಟಲಿ…