ಅಡವಿಸೋಮಾಪೂರ.12. ಇಲ್ಲಿ ಸಮೀಪದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಡವಿಸೋಮಾಪೂರ ಸಣ್ಣ ತಾಂಡೆ ಶಾಲೆಯಲ್ಲಿ ಮಹಾ ಆಧ್ಯಾತ್ಮಕ ಚೇತನ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು.
ಶಾಲೆಯ ಮುಖ್ಯ ಶಿಕ್ಷಕ ಮಲ್ಲೇಶ ಡಿ ಎಚ್ ಸ್ವಾಮಿ ವಿವೇಕಾನಂದರ ಜೀವನ ಸಂದೇಶ ಕುರಿತು ಮಾತನಾಡಿದರು.
ಶಾಲೆಯ ಶಿಕ್ಷಕರಾದ ಎಸ್ ಜಿ ಅಮ್ಮಿನಭಾವಿ, ಎಸ್ ಟಿ ಹಳಕಟ್ಟಿ, ಪಿ ಬಿ ಕಿಲಬನವರ, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮಾರುತಿ ಪವಾರ,ಬಿಸಿಯೂಟ ಸಿಬ್ಬಂದಿಗಳಾದ ಗಂಗವ್ವ ಲಮಾಣಿ, ಸಾವಿತ್ರಿ ರಾಠೋಡ, ದೇವಕ್ಕ ಲಮಾಣಿ ಶಾಲಾ ಮಕ್ಕಳು ಈ ಸಂದರ್ಭದಲ್ಲಿ ಇದ್ದರು.